ಟಿ ಎಂ ಶಾಹಿದ್ ತೆಕ್ಕಿಲ್ ಹಾಗು ರಾಜ್ಯ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಭೇಟಿ…
ಬೆಂಗಳೂರು: ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಬೆಂಗಳೂರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಅವರು ಇಂದು ವಿಧಾನಸೌಧ ಕಚೇರಿಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಐ ಎ ಎಸ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಕನಿಷ್ಠ ವೇತನ ನೀಡುವ ಬಗ್ಗೆ, ಇತರ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಿ ಕೆಲವು ವಿಚಾರಗಳನ್ನು ಗಮನಕ್ಕೆ ತಂದು ಹಲವಾರು ಸಲಹೆಗಳನ್ನು ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಿಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ನೀಡಿದರು.



