ಸಚಿವ ಸತೀಶ್ ಜಾರಕಿಹೊಳಿ – ಟಿ. ಎಂ ಶಾಹೀದ್ ತೆಕ್ಕಿಲ್ ಭೇಟಿ…
ಬೆಂಗಳೂರು: ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಬೆಂಗಳೂರು ಇದರ ಅಧ್ಯಕ್ಷರಾದ ಟಿ. ಎಂ ಶಾಹೀದ್ ತೆಕ್ಕಿಲ್ ಅವರು ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಅವರ ಸರಕಾರಿ ನಿವಾಸದಲ್ಲಿ ಭೇಟಿ ಮಾಡಿ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲಡ್ಕದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಮಹಾಮ್ಮಾಯಿ ದೈವಸ್ಥಾನ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿಯನ್ನು ಸಲ್ಲಿಸಿದರು.







