ಎನ್​ಕೌಂಟರ್​ ತನಿಖೆಗೆ ಸುಪ್ರೀಂ ಕೋರ್ಟ್​ ಒಪ್ಪಿಗೆ…

ನವದೆಹಲಿ: ತೆಲಂಗಾಣದ ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈದಿರುವ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ಸುಪ್ರೀಂಕೋರ್ಟ್ ತ್ರಿಸದಸ್ಯರನ್ನೊಳಗೊಂಡ ಆಯೋಗವನ್ನು ನೇಮಕ ಮಾಡಿದ್ದು ಆರು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಪೊಲೀಸರು ನಡೆಸಿದ ಎನ್ ಕೌಂಟರ್ ಪ್ರಶ್ನಿಸಿ ಜಿ.ಎಸ್. ಮಣಿ ಎಂಬ ವಕೀಲ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತ್ರಿಸದಸ್ಯರನ್ನೊಳಗೊಂಡ ಆಯೋಗ ನೇಮಕ ಮಾಡಿದೆ.ತ್ರಿಸದಸ್ಯರನ್ನೊಳಗೊಂಡ ಆಯೋಗದ ನೇಮಕಕ್ಕೆ ತೆಲಂಗಾಣ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

Related Articles

Leave a Reply

Your email address will not be published. Required fields are marked *

Back to top button