ಬಿಸಿಯೂಟಕ್ಕೆ ಉಚಿತವಾಗಿ ತರಕಾರಿ ಪೂರೈಸುತ್ತಿರುವ ಮಹಮ್ಮದ್ ಶರೀಫ್ ಗೆ ಸನ್ಮಾನ….

ಬಂಟ್ವಾಳ: ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ದಲ್ಲಿ ನಡೆದ ಶಾಲಾ 99ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾಪುರಸ್ಕಾರ ಸಮಾರಂಭದಲ್ಲಿ ಶಾಲೆಗೆ ಕಳೆದ ಮೂರು ವರ್ಷಗಳಿಂದ ದಿನಂಪ್ರತಿ ಶಾಲಾ ಬಿಸಿಯೂಟಕ್ಕೆ ಉಚಿತವಾಗಿ ತರಕಾರಿ ಪೂರೈಸುತ್ತಿರುವ ಚಂದ್ರಿಕಾ ವೆಜಿಟೇಬಲ್ ಮೆಲ್ಕರ್ ಇದರ ಮಾಲಕ ಮಹಮ್ಮದ್ ಶರೀಫ್ ಇವರನ್ನು ಶಾಲಾ ಪರವಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯೆ ಮಂಜುಳಾ ಮಾಧವ ಮಾವೆ ,ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ವೀರಕಂಭ ಗ್ರಾಪಂ ಅಧ್ಯಕ್ಷೆ ಪ್ರೇಮಲತಾ, ಉಪಾಧ್ಯಕ್ಷ ವಿ.ಕೆ.ಅಬ್ಬಾಸ್, ಸದಸ್ಯರಾದ ಜಯಂತಿ ಜನಾರ್ದನ, ಪದ್ಮಾವತಿ, ಜಯಂತಿ, ಜನಾರ್ದನ ಪೂಜಾರಿ, ರಾಮಚಂದ್ರ ಪ್ರಭು, ಗಣ್ಯರಾದ ಎಂ.ತಿರುಮಲ ಕುಮಾರ್ ಮಜಿ, ಈಶ್ವರ ಭಟ್ ನಗ್ರಿಮೂಲೆ, ಎನ್. ದಿಲೀಪ್ ಕುಮಾರ್ ಎಂ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ನಿವೃತ್ತ ಡಿಜಿಎಂ ಉಗ್ಗಪ್ಪ ಶೆಟ್ಟಿ ಕೊಂಬಿಲ, ಲಯನ್ಸ್ ಕ್ಲಬ್ ಬಂಟ್ವಾಳ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೇಲ್ಕಾರ್, ವಿಶ್ವನಾಥ ಎಂ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಜಯರಾಜ್ ಎಸ್. ಬಂಗೇರ, ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಹರೀಶ ಮಾಂಬಾಡಿ, ನಿವೃತ್ತ ಮುಖ್ಯ ಶಿಕ್ಷಕ ವಿಠಲ ಶೆಟ್ಟಿ, ಗೋಳ್ತಮಜಲು ಪ್ರೌಢಶಾಲಾ ಶಿಕ್ಷಕ ನಾರಾಯಣಗೌಡ, ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥ ಸಂತೋಷ್ ಕುಮಾರ್ ಶೆಟ್ಟಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಮೂಲ್ಯ ಹಳೆವಿದ್ಯಾರ್ಥಿ ಸಂಘ ಅಧ್ಯಕ್ಷ ರಮೇಶ ಗೌಡ, ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button