ನಮ್ಮ ಫ್ರೆಂಡ್ಸ್ ಬಳಗ ಶಾಂತಿನಗರ, ಸಜೀಪ ಮುನ್ನೂರು -ವಾರ್ಷಿಕೋತ್ಸವ…

ಬಂಟ್ವಾಳ: ನಮ್ಮ ಫ್ರೆಂಡ್ಸ್ ಬಳಗ ಶಾಂತಿನಗರ, ಸಜೀಪ ಮುನ್ನೂರು ಇದರ 21ನೇ ವಾರ್ಷಿಕೋತ್ಸವವು ಜ. 1 ರಂದು ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ದ.ಕ.ಜಿ.ಪ.ಕಿ.ಪ್ರಾಥಮಿಕ ಶಾಲಾ ಮಕ್ಕಳ ಹಾಗೂ ಹಳೆ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಾಂತಿನಗರ ಶಾಲೆಯಲ್ಲಿನ ಮಿತ್ತಕಟ್ಟ ದಿ.ವೀರಪ್ಪ ಪೂಜಾರಿ ವೇದಿಕೆಯಲ್ಲಿ ವಿಜ್ರಂಭಣೆಯಿಂದ ನಡೆಯಿತು.
ಸಜೀಪ ಜನ ಸೇವಾ ಟ್ರಸ್ಟ್’ನ ಅಧ್ಯಕ್ಷ ಯಶವಂತ ದೇರಾಜೆ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀ ದುರ್ಗಾಪರಮೇಶ್ವರಿ ಭಕ್ತ ವೃಂದ ಸಜೀಪ ಇದರ ಅಧ್ಯಕ್ಷ ನವೀನ್ ಸುವರ್ಣ ಮಿತ್ತಕಟ್ಟ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯುವ ಮುಖಂಡ ಸಚಿನ್ ಮೆಲ್ಕಾರ್, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಸಜೀಪ ಮಾಗಣೆ ತಂತ್ರಿಗಳಾದ ಸುಬ್ರಹ್ಮಣ್ಯ ಭಟ್, ಸಜೀಪ ಮೂಡ ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಬೆಳ್ಚಾಡ, ದಾಮೋದರ ಪಂಡಿತ್ ಕಲ್ಲಡ್ಕ, ಸಂಸ್ಥೆಯ ಸ್ಥಾಪಕರಾದ ಎಸ್.ಕೆ ಸದಾನಂದ ಸುವರ್ಣ, ವಿಟ್ಲ ತಾಲೂಕು ಸಾಮರಸ್ಯ ಪ್ರಮುಖರಾದ ಲೋಹಿತ್ ಪಣೋಲಿಬೈಲು, ಸಿವಿಲ್ ಇಂಜಿನಿಯರ್ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ವಿಶ್ವನಾಥ ಪೂಜಾರಿ ಮರ್ತಾಜೆ, ಉದ್ಯಮಿ ಪುರುಷೋತ್ತಮ ಪೂಜಾರಿ ಮಿತ್ತಕಟ್ಟ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಶ್ರೀಮತಿ ಸುಮಿತ್ರಾ ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ಸುಪ್ರಭ ಬಾಸ್ರಿತ್ತಾಯ ಸ್ವಾಗತಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button