ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಿಸಲು ಅವಕಾಶ ನೀಡುವುದಿಲ್ಲ – ಕಲ್ಲಡ್ಕ ಪ್ರಭಾಕರ್ ಭಟ್….

ರಾಮನಗರ : ಯಾವುದೇ ಕಾರಣಕ್ಕೂ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆಯನ್ನು ನಿರ್ಮಿಸಲು ಅವಕಾಶ ನೀಡುವುದಿಲ್ಲ, ನಾವು ಬಲಿದಾನಕ್ಕೆ ಸಿದ್ಧರಿದ್ದೇವೆ ಎಂದು ‘ಕನಕಪುರ ಚಲೋ’ ವೇಳೆ ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಎಚ್ಚರಿಕೆ ನೀಡಿದ್ದಾರೆ.
ಕನಕಪುರದ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣವನ್ನು ವಿರೋಧಿಸಿ ಇಂದು ‘ಕನಕಪುರ ಚಲೋ’ಗೆ ಕರೆ ನೀಡಲಾಗಿದೆ. ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಾವಿರಾರು ಹಿಂದು ಕಾರ್ಯಕರ್ತರು ಭಾಗವಹಿಸಿದ್ದಾರೆ. ತೀವ್ರ ಪ್ರತಿಭಟನೆಯ ನಡುವೆಯೂ ಇಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಕಪಾಲಬೆಟ್ಟದ ವಿವಾದಿತ ಗೋಮಾಳದಲ್ಲೇ ಏಸು ಪ್ರತಿಮೆ ನಿರ್ಮಾಣ ಮಾಡಲಾಗುವುದು. , ಸರ್ಕಾರಕ್ಕೆ ಈ ಬಗ್ಗೆ ಜಿಲ್ಲಾಧಿಕಾರಿ ವರದಿ ಕೊಟ್ಟಿದಾರೆ. ಸಂಪುಟ ಸಭೆಯಲ್ಲೇ ಎಲ್ಲವೂ ಕ್ಲಿಯರ್ ಆಗುತ್ತದೆ ಎಂದಿದ್ದರು.

ಇದಕ್ಕೆ ಪ್ರತಿಯಾಗಿ ಕನಕಪುರದಲ್ಲಿ ಸವಾಲು ಹಾಕಿರುವ ಕಲ್ಲಡ್ಕ ಪ್ರಭಾಕರ್ ಭಟ್, ಗೆಲುವಿಗಾಗಿಯೇ ನಮ್ಮ ಹೋರಾಟ. ನಮ್ಮ ತಾಕತ್ತೇನು ಎಂಬುದನ್ನು ನಾವು ತೋರಿಸುತ್ತೇವೆ. ಹಿಂದೂ ಸಮಾಜದ ತಾಕತ್ತು ತೋರಿಸುತ್ತೇವೆ. ಹಿಂದೂಗಳಿಗೆ ವಂಚಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button