ರಸ್ತೆ ಅಪಘಾತದಲ್ಲಿ ನಾರಾಯಣ ಜೋಯಿಸ ಮೃತ್ಯು…

ಪುತ್ತೂರು: ಓಮ್ನಿ ಹಾಗೂ ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ವೇ.ಮೂ. ಕೊಡಿಪ್ಪಾಡಿ ನಾರಾಯಣ ಜೋಯಿಸ ಮೃತಪಟ್ಟ ಘಟನೆ ಮಾಣಿ ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ನಾರಾಯಣ ಜೋಯಿಸ ಅವರು ಪೆರ್ಲಂಪಾಡಿಯ ಮೂಲ ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ನಿಮಿತ್ತ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾದರೂ ಪ್ರಯೋಜನವಾಗಿಲ್ಲ. ರಸ್ತೆ ಮಧ್ಯೆದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button