ಮಾ.5 – ವಿ. ತಾ.ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟ…

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವು ಮಾರ್ಚ್ 5 ಗುರುವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಂದು ಪೂರ್ವಾಹ್ನ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರಿನ ಸುಧಾನ ವಸತಿಯುತ ಶಾಲೆಯ ಸಂಚಾಲಕ ಹಾಗೂ ಪುತ್ತೂರು ತಾಲೂಕು ಕಬಡ್ಡಿ ಅಸೋಸಿಯೇಶನ್‍ನ ಅಧ್ಯಕ್ಷರಾದ ರೆ.ಫಾ.ವಿಜಯ್ ಹಾರ್ವಿನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್.ಡಿ.ಸೋಜ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.
ಎರಡು ವಾಲಿಬಾಲ್ ಅಂಕಣದಲ್ಲಿ ಈ ಸ್ಪರ್ಧೆಗಳು ನಡೆಯಲಿದ್ದು, ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ 16 ತಂಡಗಳು ಇದರಲ್ಲಿ ಭಾಗವಹಿಸುತ್ತವೆ ಎಂದು ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button