ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅವಕಾಶವಿಲ್ಲ…

ಬೆಂಗಳೂರು : ವಿಶ್ವದಾದ್ಯಂತ ಅಪಾರ ಸಾವು ನೋವುಗಳಿಗೆ ಕಾರಣವಾಗಿರುವ ಕೊರೊನಾ ವೈರಸ್‌ ಹಬ್ಬುತ್ತಿರುವ ಹಿನ್ನಲೆಯಲ್ಲಿ ಮಾರ್ಚ್ 31 ರವರೆಗೆ ರಾಜ್ಯದ ಎಲ್ಲಾ ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆ ಮಾತ್ರವಲ್ಲದೇ ದೈನಂದಿನ ಸಾಮೂಹಿಕ ಪ್ರಾರ್ಥನೆಯನ್ನೂ ಸ್ಥಗಿತಗೊಳಿಸಲಾಗಿದೆ.

ಈ ಕುರಿತು ಅಲ್ಪಸಂಖ್ಯಾತರ ಕಲ್ಯಾಣ ಹಜ್‌ ಮತ್ತು ವಕ್ಫ್‌ ಇಲಾಖೆಯ ಕಾರ್ಯದರ್ಶಿ ಎ.ಬಿ. ಇಬ್ರಾಹಿಂ ಅವರು ಪತ್ರಿಕಾ ಪ್ರಕಟನೆ ನೀಡಿದ್ದಾರೆ.

ಹಾಗೆಯೇ ಎಲ್ಲಾ ಮಸೀದಿಗಳಲ್ಲಿ ಕಡಿಮೆ ಧ್ವನಿಯಲ್ಲಿ ಆಝಾನ್‌ ನಿರ್ವಹಣೆ ಮಾಡಬೇಕು ಹಾಗೂ ಮಸೀದಿಯ ಪೇಶ್‌ ಇಮಾಮ್, ಮೌಝನ್‌ರವರು ಹಾಗೂ ಮಸೀದಿಯ ಇತರೆ ಸಿಬ್ಬಂದಿಗಳನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕರನ್ನು ಮಸೀದಿಯಲ್ಲಿ ನಮಾಝ್‌ ನಿರ್ವಹಣೆಗೆ ಅವಕಾಶವಿಲ್ಲ.

Related Articles

Leave a Reply

Your email address will not be published. Required fields are marked *

Back to top button