ಸುಳ್ಯದಲ್ಲಿ ಆ್ಯಂಬುಲೆನ್ಸ್‌ ಅಪಘಾತ…

ಸುಳ್ಯ: ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಮುಗಿಸಿ ಆ್ಯಂಬುಲೆನ್ಸ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿ ಮೂವರು ಆಸ್ಪತ್ರೆಗೆ ದಾಖಲಾದ ಘಟನೆ ನಗರದ ಹಳೆಗೇಟಿನಲ್ಲಿ ಇಂದು ನಡೆದಿದೆ.

ನಾಲ್ಕು ದಿನಗಳ ಹಿಂದೆ ಕೊಡಗು ಶನಿವಾರಸಂತೆಯ ಸುರೇಶ್‌ ಎಂಬವರು ವಿಷ ಸೇವಿಸಿದ್ದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೇ 9ರಂದು ಡಿಸ್ಚಾರ್ಜ್ ‌ ಆಗಿ ಆ್ಯಂಬುಲೆನ್ಸ್‌ನಲ್ಲಿ ಊರಿಗೆ ತೆರಳುತ್ತಿದ್ದಾಗ ಹಳೆಗೇಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಚಾಲಕ ಕಾರ್ತಿಕ್‌, ಪ್ರಯಾಣಿಕರಾದ ಸುರೇಶ್‌ ಮತ್ತು ಗೌತಮ್‌ ಗಾಯಗೊಂಡಿದ್ದು, ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button