ಆದಿತ್ಯವಾರ-ದ.ಕ. ಜಿಲ್ಲೆಯಲ್ಲಿ 14 , ಉಡುಪಿ ಜಿಲ್ಲೆಯಲ್ಲಿ 10 ಮಂದಿಯಲ್ಲಿ ಕೊರೊನಾ ದೃಢ…
![](wp-content/uploads/2020/03/santhu-10.03.2020-korona-jpg.webp)
ಮಂಗಳೂರು: ಇಂದು(ಆದಿತ್ಯವಾರ) ದ.ಕ. ಜಿಲ್ಲೆಯಲ್ಲಿ 14 ಮಂದಿಯಲ್ಲಿ ಹಾಗೂ ಉಡುಪಿ ಜಿಲ್ಲೆಯಲ್ಲಿ 10 ಮಂದಿಯಲ್ಲಿ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.
ದ.ಕ. ಜಿಲ್ಲೆಯ 14 ಸೋಂಕಿತರ ಪೈಕಿ ಒಬ್ಬರು ದುಬೈನಿಂದ ಬಂದಿದ್ದು, ಮತ್ತೊಬ್ಬರು ಮಲೇಶ್ಯಾದಿಂದ ಮರಳಿದವರಾಗಿದ್ದಾರೆ.ಉಳಿದವರು ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ.
ಉಡುಪಿಯ 10 ಸೋಂಕಿತರ ಪೈಕಿ 9 ಮಂದಿ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. ದೋಹಾದಿಂದ ಆಗಮಿಸಿದ ಓರ್ವ ವ್ಯಕ್ತಿಯಲ್ಲೂ ಕೊರೊನಾ ಪತ್ತೆಯಾಗಿದೆ.
ಇನ್ನು ರಾಜ್ಯದಲ್ಲಿ 299 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3221ಕ್ಕೆ ಏರಿದೆ.ರಾಯಚೂರಿನಲ್ಲಿ 83, ಯಾದಗಿರಿಯಲ್ಲಿ 44, ಬೀದರ್ನಲ್ಲಿ 33, ಬೆಂಗಳೂರು ನಗರದಲ್ಲಿ 21, ದಕ್ಷಿಣ ಕನ್ನಡದಲ್ಲಿ 14, ವಿಜಯಪುರದಲ್ಲಿ 26, ಬೆಳಗಾವಿ ಮತ್ತು ಮಂಡ್ಯದಲ್ಲಿ ತಲಾ 13 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಬೀದರ್ ಮತ್ತು ರಾಯಚೂರಿನಲ್ಲಿ ಇಬ್ಬರು ಸೋಂಕಿತರು ಬಲಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.