ಕೃಷ್ಣಾಪುರದ ಯುವಕ ನೀರಲ್ಲಿ ಮುಳುಗಿ ಸಾವು…

ಸುರತ್ಕಲ್: ಕೆರೆಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೃಷ್ಣಾಪುರ ಸಮೀಪ ಶನಿವಾರ ನಡೆದಿದೆ.
ಮೃತ ಯುವಕನನ್ನು ಸ್ಥಳೀಯ ನಿವಾಸಿ ತಾರನಾಥ್ ಎಂಬವರ ಪುತ್ರ ಸಂತೋಷ್ ದೇವಾಡಿಗ (22) ಎಂದು ಗುರುತಿಸಲಾಗಿದೆ.
ಸಂತೋಷ್ ತನ್ನ ನಾಲ್ಕು ಗೆಳೆಯರ ಜೊತೆ ಶನಿವಾರ ಮಧ್ಯಾಹ್ನ ಕೃಷ್ಣಾಪುರ ಬಳಿಯ ಕೆರೆಯಲ್ಲಿ ಈಜಲು ತೆರಳಿದ್ದರು. ಕೆರೆಯ ಕಲ್ಲಿನ ಪಕ್ಕದಲ್ಲೇ ಈಜಾಡುತ್ತಿದ್ದ ವೇಳೆ ಕಾಲುಜಾರಿ ನೀರಿನಾಳಕ್ಕೆ ಬಿದ್ದು ಮೇಲೆ ಬರಲಾಗದೇ ಸ್ನೇಹಿತರ ಕಣ್ಣೆದುರೇ ಮುಳುಗಿದ್ದಾನೆ. ಸಂತೋಷ್ ಮುಳುಗುವುದನ್ನು ಕಂಡು ಸ್ನೇಹಿತರು ಬೊಬ್ಬೆ ಹೊಡೆದಿದ್ದು ಸ್ಥಳೀಯರು ಸ್ಥಳಕ್ಕಾಗಮಿಸಿ ರಕ್ಷಿಸಲು ಯತ್ನಿಸಿದರೂ ಬದುಕುಳಿಸಲಾಗಲಿಲ್ಲ.
ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button