ಆದಿತ್ಯವಾರ: ಕೊರೋನಾಕ್ಕೆ ಬೆಳ್ತಂಗಡಿಯ ವ್ಯಕ್ತಿ ಸಾವು…

ಮಂಗಳೂರು: ಕೊರೋನಾಕ್ಕೆ ಬೆಳ್ತಂಗಡಿ ತಾಲೂಕಿನ ವ್ಯಕ್ತಿಯೊಬ್ಬರು ಭಾನುವಾರ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ ಕೊರೋನಾ ಬಲಿಯಾದವರು.

ಕಳೆದ ಕೆಲವು ದಿನಗಳಿಂದ ಇವರಲ್ಲಿ ಕೊರೋನಾ ಲಕ್ಷಣಗಳು ಗೋಚರಿಸಿದ್ದು, ಜು.12ರಂದು ಇವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.ಇಂದು ಬೆಳಗ್ಗೆ ಮನೆಯಲ್ಲೇ ಸಾವನ್ನಪ್ಪಿದ್ದಾರೆ. ಇಂದು ವೃದ್ಧನ ವರದಿ ಬಂದಿದ್ದು, ಆತನಲ್ಲಿ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.ಬೆಳ್ತಂಗಡಿ ತಹಶೀಲ್ದಾರ್ ನೇತೃತ್ವದಲ್ಲಿ ಸೋಂಕಿತನ ಅಂತಿಮ ಸಂಸ್ಕಾರ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.

Related Articles

Leave a Reply

Your email address will not be published. Required fields are marked *

Back to top button