ಹಿಂಸಾತ್ಮಕ ಗೋ ಸಾಗಾಟಕ್ಕೆ ತಡೆ – 9 ಜಾನುವಾರುಗಳು ವಶಕ್ಕೆ…

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಕನ್ಯಾಡಿ ರಾಮಮಂದಿರ ಸಮೀಪ ಲಾರಿಯಲ್ಲಿ ಹಿಂಸಾತ್ಮಕವಾಗಿ ಗೋ ಸಾಗಾಟ ನಡೆಸುತ್ತಿದ್ದ ತಂಡವನ್ನು ಮಂಗಳವಾರ ರಾತ್ರಿ ಭಜರಂಗದಳ ಕಾರ್ಯಕರ್ತರು ತಡೆದು ಲಾರಿ ಹಾಗೂ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿ ಜಾನುವಾರುಗಳನ್ನು ರಕ್ಷಿಸಿರುವ ಘಟನೆ ವರದಿಯಾಗಿದೆ.
ಅಂಡಿಂಜೆ ಗ್ರಾಮದ ಅಬ್ದುಲ್ ಸಲಾಂ ಜಿ.(30), ಸಾವ್ಯ ಗ್ರಾಮದ ನೆಲ್ಲಿಗುಡ್ಡೆ ಮನೆ ಎಂ.ಅಕ್ಬರ್ (26) ಸಾವ್ಯ ಗ್ರಾಮದ ದರ್ಖಾಸು ಮನೆ ಸಂಜೀವ ಪೂಜಾರಿ (41) ಬಂಧಿತ ಆರೋಪಿಗಳಾಗಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ದೂರು ದಾಖಲು ಮಾಡಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button