ತಂದೆ – ಮಗನ ನಡುವೆ ಜಗಳ, ಗಂಭೀರ ಗಾಯಗೊಂಡ ತಂದೆ ಸಾವು…

ಪುತ್ತೂರು :ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಬಳಿಯ ಬಾಲಯ ಎಂಬಲ್ಲಿ ಪುತ್ರನೊಬ್ಬ ತಂದೆಯನ್ನೇ ಹತ್ಯೆ ಗೈದಿರುವ ಘಟನೆ ನಡೆದಿದೆ.
ಪುತ್ರ ಶಶಿಧರ್‌ ಹಾಗೂ ಗಂಗಾಧರ್ ಅವರ ನಡುವೆ ಜಗಳ ನಡೆದಿದ್ದು, ತಂದೆ ಹಾಗೂ ಮಗ ಇಬ್ಬರೂ ಕೂಡಾ ಗಾಯಗೊಂಡಿದ್ದರು. ಇಬ್ಬರನ್ನೂ ಕೂಡಾ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ಪೈಕಿ ತೀರಾ ಗಂಭೀರವಾಗಿ ಗಾಯಗೊಂಡ ತಂದೆ ಗಂಗಾಧರ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯವ ಸಂದರ್ಭದಲ್ಲೇ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಪುತ್ರ ಶಶಿಧರ್ ಅವರ ತಲೆಗೆ ಸಣ್ಣ ಮಟ್ಟಿನ ಗಾಯವಾಗಿದೆ. ಘಟನಾ ಸ್ಥಳಕ್ಕೆ ಮತ್ತು ಸರಕಾರಿ ಆಸ್ಪತ್ರೆಗೆ ಸಂಪ್ಯ ಪೊಲೀಸ್ ಠಾಣೆಯ ಎಸ್.ಐ ಉದಯ ರವಿ ಮತ್ತು ಸಿಬ್ಬಂದಿಗಳು ತೆರಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button