ಸಾಹಿತಿ ಭಗವಾನ್ ಮುಖಕ್ಕೆ ಮಸಿ…..

ಬೆಂಗಳೂರು: ಹಿಂದೂ ಧರ್ಮ ಮತ್ತು ಹಿಂದೂ ದೇವರುಗಳನ್ನು ಅವಮಾನಿಸುವ ಮೂಲಕ ವಿವಾದ ಮೈ ಮೇಲೆ ಎಳೆದುಕೊಳ್ಳುತ್ತಿರುವ ಸಾಹಿತಿ ಕೆಎಸ್ ಭಗವಾನ್ ಮುಖಕ್ಕೆ ನ್ಯಾಯಾಲಯದ ಆವರಣದಲ್ಲೇ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದಿದ್ದಾರೆ.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ವಕೀಲೆ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಹಿತಿ ಭಗವಾನ್ ಇಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಭಗವಾನ್ ಗೆ ಜಾಮೀನು ಮಂಜೂರು ಮಾಡಿತ್ತು. ವಿಚಾರಣೆ ಬಳಿಕ ಕೋರ್ಟ್ ನಿಂದ ಹೊರಬಂದ ಭಗವಾನ್ ಮುಖಕ್ಕೆ ಮೀರಾ ರಾಘವೇಂದ್ರ ಮಸಿ ಬಳಿಸಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button