ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಬಂಟ್ವಾಳದ ದೇವಸ್ಥಾನಗಳಿಗೆ ಕಸದ ಬುಟ್ಟಿ ವಿತರಣೆ…

ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಂಟ್ವಾಳ ಇದರ ವತಿಯಿಂದ ತಾಲೂಕಿನ ನಲ್ವತ್ತಮೂರು ದೇವಸ್ಥಾನಗಳಿಗೆ ಎಂಭತ್ತಾರು ಕಸದ ಬುಟ್ಟಿ ವಿತರಣಾ ಕಾರ್ಯಕ್ರಮ ಮತ್ತು ಎಂಭತ್ತನಾಲ್ಕು ವಿಕಲ ಚೇತನರಿಗೆ ಸಲಕರಣೆ ವಿತರಣಾ ಕಾರ್ಯಕ್ರಮ ಫೆ.3 ರಂದು ಬಂಟ್ವಾಳ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜರಗಿತು.
ಕರಾವಳಿ ಪ್ರಾದೇಶಿಕ ಕಛೇರಿ ನಿರ್ದೇಶಕ ವಸಂತ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಶ್ರೀ ಕ್ಷೇ.ಧ.ಗ್ರಾ.ಯೋ ಟ್ರಸ್ಟ್ ನಿರ್ದೇಶಕ ಸತೀಶ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ, ಕೇಂದ್ರ ಒಕ್ಕೂಟ ಅಧ್ಯಕ್ಷ ಮಾಧವ ವಳವೂರು ಪ್ರಮುಖರಾದ ಕೃಷ್ಣಪ್ಪ ಪೂಜಾರಿ , ಶೇಖರ ಸಾಮಾನಿ, ವಸಂತ ಮೂಲ್ಯ ಉಪಸ್ಥಿತರಿದ್ದರು.
ಯೋಜನಾಧಿಕಾರಿ ಜಯಾನಂದ ಪಿ. ಸ್ವಾಗತಿಸಿದರು. ಅಮಿತಾ ಪಾಣೆಮಂಗಳೂರು ವಂದಿಸಿದರು. ಹರಿಣಾಕ್ಷಿ ಸಿದ್ದಕಟ್ಟೆ ನಿರೂಪಿಸಿದರು.

Related Articles

Leave a Reply

Your email address will not be published. Required fields are marked *

Back to top button