ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ…..

ಮಂಗಳೂರು: ಅಭಿಷೇಕ್ ಎಂ ಬಿ ಇವರು ಇತ್ತೀಚೆಗೆ ಜ.12 ರಿಂದ ಜ.16 ರ ವರೆಗೆ ಉತ್ತರ ಪ್ರದೇಶದ ಲಕ್ನೋದ ಇಂದಿರಾ ಗಾಂಧಿ ಪ್ರತಿಷ್ಠಾನದಲ್ಲಿ ನಡೆದ 23ನೇ ರಾಷ್ಟ್ರೀಯ ಯುವಜನೋತ್ಸವ-2020 ರಲ್ಲಿ ಶಾಸ್ತ್ರೀಯ ಸಂಗೀತ – ಕೊಳಲು ವೈಯಕ್ತಿಕ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿ ಬೆನ್ , ಮತ್ತು ಯುವ ವ್ಯವಹಾರಗಳ ಮಂತ್ರಿ ಕಿರಣ್ ರೆಜಿಜು ಇವರ ಸಮ್ಮುಖದಲ್ಲಿ ಬಹುಮಾನವನ್ನು ನೀಡಲಾಯಿತು.
ಎಂ ಬಾಲಕೃಷ್ಣ ಮತ್ತು ಜಯ ದಂಪತಿಯ ಪುತ್ರನಾದ ಇವರು ವಿದ್ವಾನ್ ರಾಜೇಶ್ ಬಾಗ್ಲೋಡಿ, ಕಲಾತರಂಗಿಣಿ ಸುರತ್ಕಲ್ ಇವರ ವಿದ್ಯಾರ್ಥಿಯಾಗಿದ್ದು ಪ್ರಸ್ತುತ ಚೆನ್ನೈನ ವಿದುಷಿ ಶಾಂತಲಾ ಸುಬ್ರಹ್ಮಣ್ಯಂ ಇವರಲ್ಲಿ ಉನ್ನತ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿದ್ವಾನ್ ಯೋಗೀಶ್ ಶರ್ಮ ಬಳ್ಳಪದವು ಇವರಲ್ಲಿ ಮೃದಂಗ ಅಭ್ಯಾಸವನ್ನು ಮಾಡುತ್ತಿದ್ದಾರೆ. ಇವರು ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button