ದ.ಕ – ಕೊರೊನಕ್ಕೆ ಮತ್ತೊಂದು ಬಲಿ…

ಮಂಗಳೂರು : ಕೋವಿಡ್ ಆಸ್ಪತ್ರೆಗೆ ಮಂಗಳವಾರ ದಾಖಲಾಗಿದ್ದ ಉಳ್ಳಾಲದ ಅಝಾದ್ ನಗರದ 57 ವರ್ಷದ ಮಹಿಳೆ ಇಂದು(ಬುಧವಾರ) ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅನಾರೋಗ್ಯ ಕಾರಣದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈಕೆಯ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದ್ದು ನಂತರ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಹಿಳೆ ಮೃತಪಟ್ಟಿದ್ದಾರೆ. ಈ ಮಹಿಳೆಗೆ ಕೊರೊನಾ ಹೇಗೆ ಬಂದಿದೆ ಎಂದು ತಿಳಿದು ಬಂದಿಲ್ಲ. ಮಹಿಳೆಗೆ ಕೊರೊನಾ ದೃಢಪಟ್ಟ ಬಳಿಕ
ಮಹಿಳೆ ವಾಸವಿದ್ದ ನಿವಾಸ ಹಾಗೂ ಪಕ್ಕದಲ್ಲಿದ್ದ ಇದ್ದ ಇನ್ನೊಂದು ಮನೆಯಲ್ಲಿ ವಾಸವಿದ್ದವರನ್ನು ಕ್ವಾರಂಟೈನ್‌ಗೆ ಮಾಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button