ಬಂಟ್ವಾಳ – ಕಳವು ಆರೋಪಿಯ ಬಂಧನ…

ಬಂಟ್ವಾಳ: ಕಳ್ಳತನ ಮಾಡಿದ ಸೊತ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಕಳವು ಆರೋಪಿಯೋರ್ವನನ್ನು ಸೆ. 1 ರಂದು ಗ್ರಾಮಾಂತರ ಪೋಲೀಸರು ರಾಮಲ್ ಕಟ್ಟೆ ಬಸ್ ನಿಲ್ದಾಣದ ಬಳಿ ಬಂಧಿಸಿದ ಘಟನೆ ನಡೆದಿದೆ.

ಮಂಗಳೂರು ತಾಲೂಕಿನ ಬೆಂಗ್ರೆ ಕಸ್ಬಾ ನಿವಾಸಿ ಮಹಮ್ಮದ್ ಅನ್ಸಾರ್ ಬಂಧಿತ ಆರೋಪಿ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲಿಸರು ಕಳವು ಮಾಡಿದ ಸೊತ್ತುಗಳನ್ನು ರಾಮಲ್ ಕಟ್ಟೆ ಅಂಗಡಿಯೊಂದಕ್ಕೆ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಬಂಧಿಸಿದ್ದಾರೆ.
ಅಗಸ್ಟ್ 25 ರಂದು ರಾತ್ರಿ ವೇಳೆ ಪರಂಗಿಪೇಟೆ ಸೂಪರ್ ಮಾರ್ಕೆಟ್ ನಲ್ಲಿ ಸುಮಾರು 25 ಸಾವಿರ ರೂ ಮೌಲ್ಯದ ದಿನಸಿ ಸಾಮಾಗ್ರಿಗಳ ಸಹಿತ ನಗದು ಹಣವನ್ನು ಕಳವು ಮಾಡಲಾಗಿತ್ತು.ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಾಗಿ 4 ದಿನಗಳಲ್ಲಿಯೇ ಕಳವು ಆರೋಪಿಯನ್ನು ಬಂಧಿಸಿದ್ದು, ಬಂದಿತನ ಕೈಯಿಂದ ಕಳವು ಮಾಡಿದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಟ್ವಾಳ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ ಅವರ ಮಾರ್ಗದರ್ಶನದಲ್ಲಿ, ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತ್ರತ್ವದ ಗ್ರಾಮಾಂತರ ಅಪರಾಧ ವಿಭಾಗದ ಎಸ್.ಐ.ಸಂಜೀವ ಕೆ, ಎ.ಎಸ್.ಐ ಬಾಲಕೃಷ್ಣ, ಸಿಬ್ಬಂದಿಗಳಾದ ರಾಧಾಕೃಷ್ಣ, ಸುರೇಶ್, ಪುನೀತ್ , ಗೋಣಿಬಸಪ್ಪ, ಕುಮಾರ ಮತ್ತು ವಿವೇಕ್ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button