ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯ ಇನ್ನಿಲ್ಲ…

ಉಡುಪಿ: ಪದ್ಮಶ್ರೀ ಪುರಸ್ಕೃತ, ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ(85) ಅವರು ಅಂಬಲಪಾಡಿ ನಿವಾಸದಲ್ಲಿ ಡಿ. 13 ರಂದು ನಿಧನರಾದರು.

ಪ್ರಸಿದ್ಧ ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕರಾಗಿ, ಪತ್ರಕರ್ತರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.
ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ತರ್ಜುಮೆಗೈದ ಪಂಡಿತರಾಗಿದ್ದ ಅವರು ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯ ಚಲನ ಚಿತ್ರಗಳಿಗೆ ಸಂಭಾಷಣೆಯನ್ನೂ ಬರೆದಿದ್ದರು. ಉಪನಿಷತ್ತಿನ ಅಧ್ಯಾಯಗಳಿಗೆ ಟಿಪ್ಪಣಿ ಬರೆದಿದ್ದ ಗೋವಿಂದಾಚಾರ್ಯರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button