ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಅಯ್ಯಪ್ಪ ಗುಡಿಯಲ್ಲಿ ಅಭಿಷೇಕ…..

ಪುತ್ತೂರು: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಗುಡಿಯಲ್ಲಿ ಶುಕ್ರವಾರ ದೀಪಾರಾಧನೆಯ ಪ್ರಯುಕ್ತ ಶ್ರೀ ಅಯ್ಯಪ್ಪ ಸ್ವಾಮಿಯ ವಿಗ್ರಹಕ್ಕೆ ವಿವಿಧ ಅಭಿಷೇಕಗಳನ್ನು ನೆರವೇರಿಸಲಾಯಿತು.

ಧಾರ್ಮಿಕ ವಿಧಿ ವಿಧಾನಗಳು ಬ್ರಹ್ಮಶ್ರೀ ಕುಂಟಾರು ಶ್ರೀಧರ್ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಬೆಳಗ್ಗೆ ದೀಪಾರಾಧನೆಯ ಪ್ರಯುಕ್ತ ದೇವತಾ ಪ್ರಾರ್ಥನೆ, ಗಣಹೋಮ, ಮಧ್ಯಾಹ್ನ ಶ್ರೀ ಅಯ್ಯಪ್ಪ ಸ್ವಾಮಿಗೆ ಭಸ್ಮ, ಶ್ರೀಗಂಧ, ಹಾಲು, ಎಳನೀರು, ತುಪ್ಪ, ಪನ್ನೀರು, ನೀರಿನ ಅಭಿಷೇಕ, ಬಳಿಕ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಾಲಯದ ಆಡಳಿತಾಧಿಕಾರಿ ವಿಷ್ಣುಪ್ರಸಾದ್, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ದೇವಾಲಯದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button