ಕೇರಳ ರಾಜ್ಯ ಸರ್ಕಾರದ ವಿರೋಧ ಪಕ್ಷದ ನಾಯಕರಾಗಿ ವಿ.ಡಿ.ಸತೀಶನ್ – ಟಿ.ಎಮ್.ಶಹೀದ್ ಅಭಿನಂದನೆ…

ಸುಳ್ಯ: ಕೇರಳ ರಾಜ್ಯ ಸರ್ಕಾರದ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ವಿ.ಡಿ.ಸತೀಶನ್ ರವರಿಗೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಮ್.ಶಹೀದ್ ತೆಕ್ಕಿಲ್ ರವರು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.
1993 ರಲ್ಲಿ ಎನ್.ಎಸ್.ಯು.ಐ ರಾಷ್ಟ್ರೀಯ ಅಧ್ಯಕ್ಷರಾದ ಸಲೀಂ ಅಹಮದ್ ರವರ ಸಮಿತಿಯಲ್ಲಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ವಿ.ಡಿ.ಸತೀಶನ್ ರವರು ಸೇವೆಸಲ್ಲಿಸಿದ್ದರು. ಅ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಎನ್ ಎಸ್.ಯು.ಐ ಪ್ರಧಾನ ಕಾರ್ಯದರ್ಶಿಯಾಗಿದ್ದ ನಾನು ಅವರೊಂದಿಗೆ ಹೋರಾಟ ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಿದ್ದೆ. 1992ರಲ್ಲಿ ನಾನು ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯ ಉಪಾಧ್ಯಕ್ಷ ರಾಗಿದ್ದ ಸಂದರ್ಭದಲ್ಲಿ ವಿ.ಡಿ.ಸತೀಶನ್ ರವರು ಕೊಚ್ಚಿನ್ ಯುನಿವರ್ಸಿಟಿಯ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರಾಗಿದ್ದರು. ಒಳ್ಳೆಯ ಸಂಘಟಕರು, ಸಂಸದೀಯಪಟು ಆದ ಇವರ ನೇತೃತ್ವದಲ್ಲಿ ಕೇರಳ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಉಜ್ವಲವಾಗಿ ಬೆಳಯಲಿ ಎಂದು ಟಿ.ಎಮ್.ಶಹೀದ್ ತೆಕ್ಕಿಲ್ ರವರು ಶುಭ ಹಾರೈಸಿದ್ದಾರೆ.

Sponsors

Related Articles

Back to top button