ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕ್ಷೇತ್ರವಾರು ಕಾಂಗ್ರೆಸ್ ಕಾರ್ಯಕರ್ತರ ಸಭೆ…

ಬಂಟ್ವಾಳ: ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಜೀಪ ಮುನ್ನೂರು, ಕೊಳ್ನಾಡು ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಜೂ.9 ರಂದು ಹಮ್ಮಿಕೊಂಡಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು , ವಿಧಾನ ಪರಿಷತ್ತಿನ ಸದಸ್ಯರಾದ ಕೆ.ಹರೀಶ್ ಕುಮಾರ್ ರವರು ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ , ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಪಾಣೆಮಂಗಳೂರು ಬ್ಲಾಕ್‌ನ ಅಧ್ಯಕ್ಷರಾದ ಶ್ರೀ ಸುದೀಪ್ ಕುಮಾರ್ ಶೆಟ್ಟಿ ರವರು ಭಾಗವಹಿಸಿದರು.
ಪಂಚಾಯಿತಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ನಿವಾರಿಸಲು ಸೂಕ್ತ ಪರಿಹಾರಕ್ಕಾಗಿ ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸುವುದಾಗಿ ಮಂಜುನಾಥ ಭಂಡಾರಿ ಅವರು ತಿಳಿಸಿದರು. ಪಾಣೆಮಂಗಳೂರು ಗ್ರಾಮೀಣ ಭಾಗದ ಜನರ ಹಲವಾರು ಅಭಿವೃದ್ಧಿ ಕಾರ್ಯಗಳ ಅಹವಾಲುಗಳನ್ನು ಸ್ವೀಕರಿಸಿ, ಅವುಗಳನ್ನು ಶೀಘ್ರವಾಗಿ ನೆರವೇರಿಸುವ ಕುರಿತಾಗಿ ಭರವಸೆಯನ್ನೂ ಅವರು ನೀಡಿದರು.

Sponsors

Related Articles

Back to top button