ಸುಬ್ರಹ್ಮಣ್ಯ ಭಟ್ ಅವರಿಗೆ ಸನ್ಮಾನ…

ಬಂಟ್ವಾಳ: ಸಜೀಪ ಮಾಗಣೆ ತಂತ್ರಿ ಯಂ ಸುಬ್ರಹ್ಮಣ್ಯ ಭಟ್ ಇವರಿಗೆ ಲಯನ್ಸ್ ಕ್ಲಬ್ ಬಂಟ್ವಾಳ ಇಲ್ಲಿ ಜರಗಿದ ದೀಪಾವಳಿ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಜರಗಿದ ಗೋಪೂಜೆ, ಲಕ್ಷ್ಮಿ ಪೂಜೆ, ಬಲೀಂದ್ರ ಪೂಜೆ, ತುಳಸಿ ಪೂಜೆ ಹಾಗೂ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಗ್ಗೆ ಸನ್ಮಾನ ಪತ್ರ, ಸ್ಮರಣಿಕೆ, ಹಾರ ಹಾಕಿ, ಶಾಲು ಹೊದಿಸಿ, ಫಲಪುಷ್ಪಗಳನ್ನಿತ್ತು ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ಕೃಷ್ಣ ಶಾಮ್, ಪ್ರಥಮ ಉಪರಾಜ್ಯಪಾಲ ವಸಂತ ಕುಮಾರ ಶೆಟ್ಟಿ, ಪ್ರಾಂತೀಯ ಅದ್ಯಕ್ಷ ಸಂಜೀವ ಶೆಟ್ಟಿ, ವಲಯ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ದಾಮೋದರ ಬಿ ಯಂ, ಕಾರ್ಯದರ್ಶಿ ವೈಕುಂಠ ಕುಡ್ವ, ಕೋಶಾಧಿಕಾರಿ ಧಿಶಾ ಆಶೀರ್ವಾದ್ ಹಾಗೂ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button