ಬುಧವಾರ – ಕೊರೊನಾಗೆ ಮೂವರ ಬಲಿ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಬುಧವಾರ) ಕೊರೊನಾದಿಂದ ಮೂವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಇಂದು ಬೆಳಗ್ಗೆ ಭಟ್ಕಳ ಮೂಲದ 62 ವರ್ಷದ ವೃದ್ದೆಯೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಉಳ್ಳಾಲದ 57 ವರ್ಷದ ಮಹಿಳೆಯೋರ್ವರು ರಕ್ತದೊತ್ತಡದ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಮೃತಪಟ್ಟಿದ್ದಾರೆ. ಅಲ್ಲದೆ ಪುತ್ತೂರಿನ 32 ವರ್ಷದ ಬಾಣಂತಿಯೋರ್ವರು ಕೂಡ ಕೋವಿಡ್ ನಿಂದ ಮೃತಪಟ್ಟಿದ್ದು ಆಕೆ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button