ಗ್ರಾ.ಪಂ. ಭೇಟಿ ಕಾರ್ಯಕ್ರಮಕ್ಕೆ ಚಾಲನೆ…

ಬಂಟ್ವಾಳ: ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ಗಳ ಪ್ರಗತಿ ಪರಿಶೀಲನೆ ನಡೆಸಿ ಅಲ್ಲಿನ ಸಮಸ್ಯೆ ಗಳ ಬಗ್ಗೆ ಮಾಹಿತಿ ಪಡೆಯುವ ಸಲುವಾಗಿ ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ನೇತೃತ್ವದಲ್ಲಿ ಅಧಿಕಾರಿಗಳು ಗ್ರಾ.ಪಂ. ಭೇಟಿ ಕಾರ್ಯಕ್ರಮಕ್ಕೆ ಅ.12 ರಂದು ಕಾವಳಪಡೂರು ಗ್ರಾ.ಪಂ.ನಲ್ಲಿ ಚಾಲನೆ ನೀಡಲಾಯಿತು.
ತಾಲೂಕಿನ ಪ್ರತಿ ಗ್ರಾ.ಪಂ.ಗಳಿಗೆ ಇಂದಿನಿಂದ ಭೇಟಿ ನೀಡಿ ಅಲ್ಲಿನ ಪ್ರಗತಿ ಪರಿಶೀಲನೆಗಾಗಿ ತಾ.ಪಂ.ಅಧ್ಯಕ್ಷ ರ ನೇತೃತ್ವದ ತಂಡ ಬೇಟಿ ನೀಡಿ ಗ್ರಾಮಸ್ಥರ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಾರ್ವಜನಿಕರ ಸೂಕ್ತ ಸಲಹೆ ಸೂಚನೆಗಳನ್ನು ಪಡೆದು ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಈ ಸಂದರ್ಭದಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ, ಇ.ಒ.ರಾಜಣ್ಣ, ಇಂಜಿನಿಯರ್ ಕೃಷ್ಣ, ಕಾವಳಪಡೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಪ್ರಮೋದ್ ರೈ ಕಾಡಬೆಟ್ಟು, ಗ್ರಾ.ಪಂ.ಪಿ.ಡಿ.ಒ ಹಾಗೂ ಗ್ರಾ.ಪಂ.ಸದಸ್ಯರು ಗಳು ಹಾಜರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button