ದ.ಕ. – ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ ವತಿಯಿಂದ ಗುರುತಿನ ಚೀಟಿ ವಿತರಿಸುವ ಕಾರ್ಯಕ್ರಮ…

ಬಂಟ್ವಾಳ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ ರಿ ದ.ಕ. ಜಿಲ್ಲೆ ಇದರ ಆಶ್ರಯದಲ್ಲಿ ಬಂಟ್ವಾಳ ಕಶೆಕೋಡಿ ಕಲಾ ಆಶ್ರಯ ಸಭಾಂಗಣದಲ್ಲಿ ಜು.17 ರಂದು ಸಂಸ್ಥೆಯ ಸದಸ್ಯರಿಗೆ ಗುರುತಿನ ಚೀಟಿ ವಿತರಿಸುವ ಕಾರ್ಯಕ್ರಮ ನಡೆಯಿತು.
ಕರ್ನಾಟಕ ಸರಕಾರ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಭಾನುಪ್ರಕಾಶ್ ಶರ್ಮ ಕಾರ್ಯಕ್ರಮ ನೆರವೇರಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಪರಿಷತ್ತು ಕಾರ್ಯಾಧ್ಯಕ್ಷ ಡಾ ಬಿ ಎಸ್ ರಾಘವೇಂದ್ರ ಭಟ್, ಪೊಳಲಿ ವೆಂಕಪ್ಪಯ್ಯ ಭಟ್, ಮಂಜುನಾಥ್ ಶಾಸ್ತ್ರಿ ಬೆಂಗಳೂರು ಮಾರ್ಗದರ್ಶನ ನೀಡಿದರು. ಮಂಗಳೂರು ತಾಲೂಕು ಅಧ್ಯಕ್ಷ ಮಹೇಶ್ ಮೂರ್ತಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ರವಿಕುಮಾರ್ ಭಟ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಗಿರಿ ಪ್ರಕಾಶ್ ತಂತ್ರಿ, ಬಂಟ್ವಾಳ ತಾಲ್ಲೂಕು ನಿರ್ದೇಶಕ ಎಂ ಸುಬ್ರಹ್ಮಣ್ಯ ಭಟ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾಧ್ಯಕ್ಷರಾದ ಕೃಷ್ಣರಾಜ ಭಟ್ ಕರ್ಬೆಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಧಾರ್ಮಿಕ ಪರಿಷತ್ತು ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಸ್ವಾಗತಿಸಿ, ವಂದಿಸಿದರು.

Sponsors

Related Articles

Back to top button