ಸಜಿಪನಡು ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನ-ಸುತ್ತು ಗೋಪುರಕ್ಕೆ ಶಿಲಾನ್ಯಾಸ…

ಬಂಟ್ವಾಳ: ಸಜಿಪನಡು ಗ್ರಾಮದ ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನ ಇದರ ಜೀರ್ಣೋದ್ಧಾರದ ಅಂಗವಾಗಿ ಶ್ರೀ ಗಣಪತಿ ದೇವರ ಗರ್ಭಗುಡಿ ಹಾಗೂ ನೂತನವಾಗಿ ನಿರ್ಮಾಣಗೊಳ್ಳಲಿರುವ ಸುತ್ತು ಗೋಪುರಕ್ಕೆ ಶಿಲಾನ್ಯಾಸವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಕೆ ಪ್ರಭಾಕರ್ ಭಟ್ ಅ.21 ರಂದು ನೆರವೇರಿಸಿದರು.
ಧಾರ್ಮಿಕ ವಿಧಿ-ವಿಧಾನಗಳನ್ನು ಸಜಿಪ ಮಾಗಣೆ ತಂತ್ರಿ ಸುಬ್ರಹ್ಮಣ್ಯ ಭಟ್ ನೆರವೇರಿಸಿದರು. ವೆಂಕಟೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು. ಪ್ರಸಾದ್ ಮುನಿಯಂಗಳ ವಾಸ್ತು ಶಾಸ್ತ್ರಜ್ಞ, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ , ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಸಜೀಪ ಗುತ್ತು ಗಡಿ ಪ್ರಧಾನರಾದ ಮುಂಡಪ್ಪ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ, ಮಾಜಿ ಮುಕ್ತೇಸರ ಶಿವರಾಮ ಭಂಡಾರಿ ದಿಶಾ ಎಲೆಕ್ಟ್ರಿಕಲ್ಸ್ ಗಣೇಶ್, ಯಶವಂತ ದೇರಾಜೆ, ಕೆಟಿ ಸುಧಾಕರ್ ತಾಲೂಕು ಪಂಚಾಯತ್ ಸದಸ್ಯ ನಮಿತಾ ಕರ್ಕೇರ. ಪ್ರವೀಣ್ ಆಳ್ವ ರಾಮಕೃಷ್ಣ ಭಟ್, ವಸಂತ್ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು

Sponsors

Related Articles

Leave a Reply

Your email address will not be published. Required fields are marked *

Back to top button