ಮುಡಾ ಅಧ್ಯಕ್ಷರಾಗಿ ರವಿಶಂಕರ್‌ ಮಿಜಾರು ಅಧಿಕಾರ ಸ್ವೀಕಾರ…

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದ ನೂತನ ಅಧ್ಯಕ್ಷರಾಗಿ ಕರ್ನಾಟಕ ಸರಕಾರದಿಂದ ನೇಮಕಗೊಂಡಿರುವ ರವಿಶಂಕರ್‌ ಮಿಜಾರು ಅವರು ನಗರದ ಉರ್ವಸ್ಟೋರ್‌ನಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕ ಎನ್‌. ಯೋಗೀಶ್‌ ಭಟ್‌, ಮೇಯರ್‌ ದಿವಾಕರ ಪಾಂಡೇಶ್ವರ, ಮುಡಾ ಆಯುಕ್ತ ದಿನೇಶ್‌ ಕುಮಾರ್‌, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ. ಸುದರ್ಶನ್‌, ಬಿಜೆಪಿ ಮುಖಂಡರಾದ ನಿತಿನ್‌ ಕುಮಾರ್‌, ಸುಧೀರ್‌ ಶೆಟ್ಟಿ ಕಣ್ಣೂರು, ಹರಿಕೃಷ್ಣ ಬಂಟ್ವಾಳ, ಜಗದೀಶ ಶೇಣವ, ಸತೀಶ್‌ ಕುಂಪಲ, ವಿಜಯ ಕುಮಾರ್‌ ಶೆಟ್ಟಿ, ಈಶ್ವರ ಕಟೀಲು, ರಣದೀಪ್‌ ಕಾಂಚನ್‌ ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button