ಅಖಿಲ ಕರ್ನಾಟಕ ಬ್ರಾಹ್ಮಣ ಪುರೋಹಿತ ಮತ್ತು ಅರ್ಚಕರ ಪರಿಷತ್ – ಪದಗ್ರಹಣ ಸಮಾರಂಭ…

ಬಂಟ್ವಾಳ: ಅಖಿಲ ಕರ್ನಾಟಕ ಬ್ರಾಹ್ಮಣ ಪುರೋಹಿತ ಮತ್ತು ಅರ್ಚಕರ ಪರಿಷತ್ ರಿಜಿಸ್ಟರ್ಡ್ ಇದರ ಬಂಟ್ವಾಳ, ಮಂಗಳೂರು, ಬೆಳ್ತಂಗಡಿ, ಪುತ್ತೂರು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಂಟ್ವಾಳ ಬ್ರಾಹ್ಮಣ ಪರಿಷತ್ ಕಟ್ಟಡದಲ್ಲಿ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಕೃಷ್ಣರಾಜ ಭಟ್ ಅಧ್ಯಕ್ಷತೆಯಲ್ಲಿ ಜರಗಿತು.
ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕರ್ನಾಟಕ ಸರ್ಕಾರ ಇದರ ನಿರ್ದೇಶಕರಾದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪ್ರಧಾನ ಅರ್ಚಕರಾದ ರಾಜೇಶ್ ನಡ್ವಂತಿಲ್ಲಾಯ ಉದ್ಘಾಟಿಸಿದರು. ಕರ್ನಾಟಕ ಸರಕಾರದ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾದ ಹಾಗೂ ಅಖಿಲ ಕರ್ನಾಟಕ ಹಾಗೂ ಅರ್ಚಕರ ಮತ್ತು ಪುರೋಹಿತರ ಪರಿಷತ್ತು ರಾಜ್ಯದ ಹಿರಿಯ ಉಪಾಧ್ಯಕ್ಷರಾದ ಡಾ ವೇ. ಮೂ. ಬಿ ಎಸ್ ರಾಘವೇಂದ್ರ ಭಟ್ ಪರಿಷತ್ತಿನ ಧ್ಯೇಯೋದ್ದೇಶಗಳ ಬಗ್ಗೆ ವಿವರಿಸಿದರು. ಜಿಲ್ಲಾ ಪದಾಧಿಕಾರಿಗಳಾದ ವೇದಮೂರ್ತಿ ಕೃಷ್ಣ ಉಪಾಧ್ಯಾಯ, ವೇದಮೂರ್ತಿ ಹರಿ ಉಪಾಧ್ಯಾಯ, ರಾಘವೇಂದ್ರ ಹೊಳ್ಳ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕೆ ಸೂರ್ಯನಾರಾಯಣ ಭಟ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಪೊಳಲಿ ಗಿರಿ ಪ್ರಕಾಶ್ ತಂತ್ರಿ ಬಂಟ್ವಾಳ, ನಾಗರಾಜ ಭಟ್ ಸುಳ್ಯ, ತಾಲೂಕು ಘಟಕದ ಪದಾಧಿಕಾರಿಗಳಾದ ವೇದಮೂರ್ತಿ ಶಿವರಾಮ ಮಯ್ಯ, ಈಶ್ವರ ಭಟ್, ಶ್ರೀನಿಧಿ ಮುಚ್ಚಿನ್ನಾಯ, ಪೈಕ ವೆಂಕಟ್ರಮಣ ಭಟ್, ರಾಜಗೋಪಾಲ ಆಚಾರ್ಯ, ಅನಂತಪದ್ಮನಾಭ ಆಚಾರ್ಯ, ಎo ಸುಬ್ರಹ್ಮಣ್ಯ ಭಟ್, ಸುದರ್ಶನ ಬಲ್ಲಾಳ್, ರಾಘವೇಂದ್ರ ರಾವ್, ಬಾಲಕೃಷ್ಣ ಕಾರಂತ, ಕೆ ವಾಸುದೇವ ಭಟ್ ಮೊದಲಾದವರು ಉಪಸ್ಥಿತರಿದ್ದರು

Sponsors

Related Articles

Leave a Reply

Your email address will not be published. Required fields are marked *

Back to top button