ಸುಳ್ಯದ ವಿದ್ಯಾರ್ಥಿನಿ ಮನುಜ್ಞ ಯು.ಬಿ ರಾಜ್ಯಕ್ಕೆ ಪ್ರಥಮ…

ಸುಳ್ಯ: ಕರುನಾಡು ಸಾಹಿತ್ಯ ಪರಿಷತ್ತು ತಾಲೂಕು ಘಟಕ ಚಿಂತಾಮಣಿ ಇವರು ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ್ಜಾಲ ಚಿತ್ರಕಲಾ ಸ್ಪರ್ಧೆಯಲ್ಲಿ 1 ರಿಂದ 5 ನೇ ತರಗತಿ ವಿಭಾಗದಲ್ಲಿ ಸುಳ್ಯದ ರೋಟರಿ ವಿದ್ಯಾ ಸಂಸ್ಥೆಯ 5 ನೇ ತರಗತಿಯ ವಿದ್ಯಾರ್ಥಿನಿ ಮನುಜ್ಞ ಯು.ಬಿ.ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಕರುನಾಡು ಕಲಾಕುಂಚ ಇ-ಪ್ರಶಸ್ತಿಗೆ ಭಾಜನರಾಗಿದ್ದಾರೆ.
6 ರಿಂದ 10 ನೇ ತರಗತಿ ವಿಭಾಗದಲ್ಲಿ ರೋಟರಿ ವಿದ್ಯಾಸಂಸ್ಥೆಯ 8 ನೇ ತರಗತಿಯ ವಿದ್ಯಾರ್ಥಿನಿ ಮನಸ್ವಿ ಯು. ಬಿ. ಇವರ ಚಿತ್ರ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿದೆ. ಇವರು ದೇವರಾಜ್ ಯು.ಬಿ., ಹಾಗೂ ಕೆವಿಜಿ ಆಯುರ್ವೇದ ಕಾಲೇಜಿನ ವೇದಾಮಣಿ ಯಂ.ಬಿ. ಅವರ ಸುಪುತ್ರಿಯರು.

Sponsors

Related Articles

Leave a Reply

Your email address will not be published. Required fields are marked *

Back to top button