ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ – ಶಾಸ್ತರ ಗುಡಿಯ ಶಿಲಾನ್ಯಾಸ…

ಬಂಟ್ವಾಳ: ಜೀರ್ಣೋದ್ಧಾರ ಗೊಳ್ಳುತ್ತಿರುವ ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಹೊರಾಂಗಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶಾಸ್ತರ ಗುಡಿಯ ಶಿಲಾನ್ಯಾಸವನ್ನು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರವೀಣ್ ಆಳ್ವ ನೆರವೇರಿಸಿದರು.
ಧಾರ್ಮಿಕ ವಿಧಿ-ವಿಧಾನಗಳನ್ನು ಭೂಮಿಪೂಜೆ ಯೊಂದಿಗೆ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೆರವೇರಿಸಿದರು ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷಮುಳ್ಳುoಜ ವೆಂಕಟೇಶ್ವರ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ ಕೃಷ್ಣ ಶಾಮ್, ಪ್ರಮುಖರಾದ ಪದ್ಮನಾಭ ಭಟ್, ರಾಮಕೃಷ್ಣ ಭಟ್, ರಾಮಚಂದ್ರ , ಸುಧಾಕರ ಕೆ ಟಿ, ನಿತಿನ್ ಅರಸ, ಕಿಶನ್ ಶೇಣವ, ಶೀನ , ಸುರೇಶ್ ಬಂಗೇರ, ಪ್ರದೀಪ್ ಶೆಟ್ಟಿ, ಶುಭಾಷ್, ಭಾಸ್ಕರ, ಗೋಪಾಲ ಭಟ್ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button