ನರೇಂದ್ರ ಮೋದಿಯವರ 70 ನೇ ಜನ್ಮ ದಿನಾಚರಣೆ…
![](wp-content/uploads/2020/09/9898f517-5681-459d-93f7-32467f4b6f77-780x470.webp)
ಬಂಟ್ವಾಳ: ಪ್ರಧಾನಿ ನರೇಂದ್ರ ದಾಮೋಧರ್ ದಾಸ್ ಮೋದಿಯವರ 70 ನೇ ಜನ್ಮ ದಿನಾಚರಣೆ ಪ್ರಯುಕ್ತ ,ನಂದಾವರದ ಶ್ರೀ ವಿನಾಯಕ ಶಂಕರನಾರಾಯಣ ದೇವಸ್ಥಾನದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಪ್ರಧಾನಿಯವರಿಗೆ ದೀರ್ಘಾಯುರಾರೋಗ್ಯವನ್ನು ಕರುಣಿಸುವಂತೆ ಪ್ರಾರ್ಥನೆ ಮಾಡಿ ದೇವರಿಗೆ ರುದ್ರಾಭಿಷೇಕ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬೂಡಾ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಬಿಜೆಪಿ ಕಾರ್ಯದರ್ಶಿಗಳಾದ ರಮಾನಾಥ ರಾಯಿ,ಸೀತಾರಾಮ ಪೂಜಾರಿ,ಗಣೇಶ್ ರೈ ಮಾಣಿ,ಪುರುಷೋತ್ತಮ ಶೆಟ್ಟಿ,ಪ್ರಮುಖರಾದ ಪುಷ್ಪರಾಜ್ ಚೌಟ ಉಪಸ್ಥಿತರಿದ್ದರು.