ಸಾಹಿತ್ಯ ತಾರೆ ಮತ್ತು ಬಾಲಬಂಧು ಪ್ರಶಸ್ತಿಗೆ ಕರೆ…

ಬಂಟ್ವಾಳ: “ಮಕ್ಕಳ ಕಲಾಲೋಕ” ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಇದು ನಿರ್ವಹಿಸುವ 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು 2023ರ ದಶಂಬರ್ ಮೊದಲ ವಾರದಲ್ಲಿ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕಡೇಶ್ವಾಲ್ಯದ ಸಹಭಾಗಿತ್ವದಲ್ಲಿ ನಡೆಸಲಾಗುವುದು ಎಂದು ಸಮ್ಮೇಳನದ ಪೂರ್ವಭಾವಿ ಚಿಂತನಾ ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಹರಿಶ್ಚಂದ್ರ ಎಂ. ತಿಳಿಸಿರುವರು.

ತಾಲೂಕಿನಲ್ಲಿ 18ವರ್ಷ ಪ್ರಾಯದೊಳಗಿನ ಮಕ್ಕಳಿರುವ ಸರಕಾರಿ, ಅನುದಾನಿತ , ಅನುದಾನ ರಹಿತ ವಿದ್ಯಾಸಂಸ್ಥೆಗಳಲ್ಲಿ ಐದು ವರ್ಷಗಳ ಈಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಬರೆದು ಕಳುಹಿಸಿರಿ. ಆಯ್ದ ಒಂದು ವಿದ್ಯಾಸಂಸ್ಥೆಗೆ “ಸಾಹಿತ್ಯ ತಾರೆ” ಪ್ರಶಸ್ತಿಯನ್ನು ನೀಡಲಾಗುವುದು. ಮಕ್ಕಳಿಗಾಗಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಸಹಕರಿಸುತ್ತಿರುವ ಶಿಕ್ಷಕರು ಅಥವಾ ಸಾರ್ವಜನಿಕ ಕಲಾಗಾರರ ಸಾಧನೆಗಳ ವಿವರಗಳನ್ನು ಪಟ್ಟಿ ಮಾಡಿ ಕಳುಹಿಸಿರಿ. ಆಯ್ದ ಸಾಧಕರೊಬ್ಬರಿಗೆ “ಬಾಲ ಬಂಧು” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಎರಡೂ ವಿವರಗಳನ್ನು 2023 ಅಕ್ಟೋಬರ್ 25ರೊಳಗೆ ಕೆಳಗಿನ ವಿಳಾಸಕ್ಕೆ ತಲುಪಿಸಬೇಕೆಂದು “ಮಕ್ಕಳ ಕಲಾ ಲೋಕ”ದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಪ್ರಕಟಣೆಯಲ್ಲಿ ತಿಳಿಸಿರುವರು. ಅಧ್ಯಕ್ಷರು. “ಮಕ್ಕಳ ಕಲಾ ಲೋಕ” -ಸ್ಕಂದ- ಅಳಕೆ ಮಜಲು 574243. ಮೊ: 9448626093

Sponsors

Related Articles

Back to top button