ಪ್ರಾಕೃತಿಕ ವಿಕೋಪ – ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆ…

ಸುಳ್ಯ: ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಾಲೂಕು ಮತ್ತು ಸ್ಥಳೀಯಾಡಳಿತ ಅಧಿಕಾರಿಗಳು ತತ್‌ಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಎಸ್‌.ಅಂಗಾರ ಸೂಚಿಸಿದರು.

ತಾ.ಪಂ.ಸಭಾಂಗಣದಲ್ಲಿ ಜರಗಿದ ತಾಲೂಕು ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರಸ್ತೆ ಬದಿಯ ಅಪಾಯಕಾರಿ ಮರ, ಗೆಲ್ಲು ತೆರವು, ಚರಂಡಿ ದುರಸ್ತಿ ಸಹಿತ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕಲ್ಮಕಾರಿನಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿ ಉಂಟಾದ 9 ಮನೆಗಳಿಗೆ ಸೂರು ಒದಗಿಸಲು ಅರಣ್ಯ ಭೂಮಿ ಅಡ್ಡಿ ಉಂಟಾಗಿದೆ ಎಂದು ತಹಶೀಲ್ದಾರ್‌ ಹೇಳಿದರು. ಈ ಬಗ್ಗೆ ಅರಣ್ಯ ಅಧಿಕಾರಿ ಗಳಿಂದ ಮಾಹಿತಿ ಪಡೆದ ಶಾಸಕರು, ಉನ್ನತ ಅಧಿಕಾರಿಗಳ ಜತೆ ಚರ್ಚಿಸುವುದಾಗಿ ಹೇಳಿದರು.
ಪ್ರಾಕೃತಿಕ ವಿಕೋಪದಿಂದ ಮನೆಗೆ ಭಾಗಶಃ ಹಾನಿ ಎಂದು ಅಧಿಕಾರಿಗಳು ವರದಿ ಸಲ್ಲಿಸಿದರೆ ಫಲಾನುಭವಿಗೆ ಅಲ್ಪ ಪರಿಹಾರ ಮಾತ್ರ ಸಿಗುತ್ತದೆ. ಹಾಗಾಗಿ ಭಾಗಶಃ ಎಂದು ವರದಿ ಸಲ್ಲಿಸದೆ ಪೂರ್ಣ ಹಾನಿ ಎಂದು ನಮೂದಿಸಿ ಎಂದು ಶಾಸಕರು ಸೂಚಿಸಿದರು.
ವೇದಿಕೆಯಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸ್ಥಾಯೀ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ತಹಶೀಲ್ದಾರ್‌ ಅನಂತಶಂಕರ, ಇಒ ಭವಾನಿಶಂಕರ ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button