ಡಿ ಕೆ ಶಿ ಪದಗ್ರಹಣ, ಜಿಲ್ಲೆಯ 176 ಕಡೆಗಳಲ್ಲಿ ವೀಕ್ಷಣೆಗೆ ಅವಕಾಶ- ಮಂಜುನಾಥ ಭಂಡಾರಿ…

ಉಡುಪಿ: ಜುಲೈ 2 ರಂದು ನಡೆಯಲಿರುವ ಕೆಪಿಸಿಸಿ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ವೀಕ್ಷಣೆಗೆ ಝೂಮ್ ಆ್ಯಪ್ ಮೂಲಕ ಜಿಲ್ಲೆಯ 159 ಬೂತ್ ಗಳ 176 ಕಡೆಗಳಲ್ಲಿ ವೀಕ್ಷಣೆಗೆ ಅವಕಾಶ ಮಾಡಲಾಗಿದೆ ಎಂದು ಕಾರ್ಯಕ್ರಮ ಉಸ್ತುವಾರಿ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪ್ರಗತಿ ಕಾಣಲಿದೆ. ವ್ಯಕ್ತಿಗೆ ಆದ್ಯತೆ ನೀಡದೇ ಪಕ್ಷದ ಹಿತವನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುವಂತೆ ಅವರು ಕಾರ್ಯಕರ್ತರಿಗೆ ಈಗಾಗಲೇ ಕರೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಸಂಘಟನೆ ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ಧೋರಣೆಗಳಿಂದ ಜನತೆ ಭ್ರಮನಿರಸನಗೊಂಡಿದ್ದಾರೆ. ಯುವಜನತೆ ಕಾಂಗ್ರೆಸ್ನತ್ತ ಒಲವು ತೋರಿಸುತ್ತಿದ್ದಾರೆ. ಡಿಕೆಶಿ ಪದಗ್ರಹಣ ದಿನದಂದು ಬೂತ್ ಮಟ್ಟದಲ್ಲಿ ಸಂವಿಧಾನ ರಕ್ಷಣೆ ಮತ್ತು ಪಕ್ಷ ಸಂವರ್ಧನೆ ಬಗ್ಗೆ ಪ್ರತಿಜ್ಞೆ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಅನೇಕ ಮಂದಿ ಯುವಕರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರುವ ತವಕದಲ್ಲಿದ್ದು, ಈ ಕಾರ್ಯಕ್ರಮ ವೇದಿಕೆಯಾಗಲಿದೆ ಎಂದು ಮಂಜುನಾಥ ಭಂಡಾರಿ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಯು. ಆರ್. ಸಭಾಪತಿ, ಪಕ್ಷ ಪ್ರಮುಖರಾದ ಬಿ. ನರಸಿಂಹಮೂರ್ತಿ, ಅಲೆವೂರು ಹರೀಶ ಕಿಣಿ, ನವೀನ ಡಿ’ಸೋಜ, ವಸಂತ ಬರ್ನಾರ್ಡ್ ಮೊದಲಾದವರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button