ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಗೌರವಾರ್ಪಣೆ…

ಬಂಟ್ವಾಳ: ಬಿಸಿ ರೋಡಿನ ಚಂಡಿಕಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿಯ ವತಿಯಿಂದ ಇತ್ತೀಚಿಗೆ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡು ನಾಡಿಗೆ ಹೆಮ್ಮೆಯನ್ನು ತಂದ ಪರಮಪೂಜ್ಯ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಮಿತಿಯ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಲೋಕನಾಥ್ ಶೆಟ್ಟಿ, ಸದಸ್ಯರಾದ ರಾಜೇಶ್ ಎಲ್ ನಾಯಕ್, ಪ್ರಶಾಂತ್ ಭಟ್, ಕಾರ್ಯದರ್ಶಿ ಇಂದಿರೇಶ್ , ಮಂಜುನಾಥ ಪೈ , ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಶ್ರೀರಾಮಚಂದ್ರ ರಾವ್, ಕೋಶಾಧಿಕಾರಿ ಶ್ರೀ ಸಂಕಪ್ಪ ಶೆಟ್ಟಿ ಇವರು ಉಪಸ್ಥಿತರಿದ್ದರು.

Sponsors

Related Articles

Back to top button