ಬಂಟ್ಚಾಳ- ಅಟೋ ರಿಕ್ಷಾ ಚಾಲಕ, ಮಾಲಕರ ಸಂಘದ ಅಧ್ಯಕ್ಷರಾಗಿ ವಿಶ್ವನಾಥ ಚೆಂಡ್ತಿಮಾರ್ ಆಯ್ಕೆ…

ಬಂಟ್ಚಾಳ: ಅಟೋ ರಿಕ್ಷಾ ಚಾಲಕ- ಮಾಲಕರ (ಬಿ.ಎಂ.ಎಸ್) ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಸತತವಾಗಿ ಎರಡನೇ ಬಾರಿಗೆ ವಿಶ್ವನಾಥ ಚೆಂಡ್ತಿಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಇವರನ್ನು ‌ರಿಕ್ಷಾ ಚಾಲಕ- ಮಾಲಕರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.
ಗೌರವಾಧ್ಯಕ್ಷರಾಗಿ ವಸಂತ ಮಣಿಹಳ್ಳ, ಕಾರ್ಯದರ್ಶಿಯಾಗಿ ಶ್ರೀಕಾಂತ್ ಪಾಣೆಮಂಗಳೂರು, ಕೋಶಾಧಿಕಾರಿಯಾಗಿ ರವಿ ಪಾಣೆಮಂಗಳೂರು ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ಕೃಷ್ಣ ಕುಮಾರ್ ತಲೆಂಬಿಲ ಹಾಗೂ ವಿವಿಧ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

Sponsors

Related Articles

Back to top button