ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ – ಅರ್ಚಕರ ಗ್ರಹಕ್ಕೆ ಶಿಲಾನ್ಯಾಸ…

ಬಂಟ್ವಾಳ: ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಇದರ ಅರ್ಚಕರ ಗ್ರಹಕ್ಕೆ ಶಿಲಾನ್ಯಾಸವನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಜಾರಾಮ್ ಭಟ್ ಟಿ ಜಿ. ನೆರವೇರಿಸಿದರು.
ಧಾರ್ಮಿಕ ವಿಧಿ-ವಿಧಾನಗಳನ್ನು ಸಜಿಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್ ವಿದ್ಯುಕ್ತವಾಗಿ ನೆರವೇರಿಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ, ನಂದಾವರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್, ಶ್ರೀಕಾಂತ್ ಶೆಟ್ಟಿ ಸಂಕೇಶ, ಸಮಿತಿ ಸದಸ್ಯರಾದ ಪ್ರವೀಣ್ ಶೆಟ್ಟಿ, ಅರ್ಚಕರಾದ ಗಣಪತಿ ಭಟ್, ಹರೀಶ್ ಬಂಗೇರ, ರಾಮಕೃಷ್ಣ ಭಟ್, ಡಾ ಶಿವರಾಮ ಜೋಶಿ, ಸುರೇಶ್ ಬಂಗೇರ, ಸುಧಾಕರ ಕೆ.ಟಿ, ಕಿಶನ್, ರಾಮ, ಗುರುಮೂರ್ತಿ ಭಟ್, ಕೇಶವ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button