ದ್ವಿತೀಯ ಪಿಯುಸಿ ಪರೀಕ್ಷೆ ರದ್ದು…

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವುದಾಗಿ ಸಚಿವ ಸುರೇಶ್ ಕುಮಾರ್ ಅವರು ಇಂದು ತಿಳಿಸಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಅವರು, ಪ್ರಥಮ ಪಿಯುಸಿ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲಾಗುತ್ತದೆ. ಕಳೆದ ವರ್ಷ ಪರಿಸ್ಥಿತಿ ಬೇರೆ ಇತ್ತು. ಮುಂಜಾಗ್ರತೆ ತೆಗೆದುಕೊಂಡು ಪರೀಕ್ಷೆ ನಡೆಸಿದ್ದೆವು. ಈ ವರ್ಷ ಎರಡನೇ ಅಲೆ ಇರುವುದರಿಂದ ಪರಿಸ್ಥಿತಿ ಬೇರೆ ರೀತಿ ಇದೆ. ಬಿಇಓಗಳ ಮೂಲಕ ಮಕ್ಕಳು ಮತ್ತು ಪೋಷಕರ ಅಭಿಪ್ರಾಯ ಪಡೆದಿದ್ದೇವೆ. ಈ ವರ್ಷವೂ ಪರೀಕ್ಷೆಗೆ ತಯಾರಿ ನಡೆಸಿದ್ದೆವು. ಆದರೆ, ಕಳೆದ ಮೂರು ದಿನಗಳಿಂದ ಈ ನಿರ್ಧರ ಮರುಪರಿಶೀಲನೆ ಬಗ್ಗೆ ಚರ್ಚೆ ನಡೆಸಿದ್ದೇನೆ. ಶಿಕ್ಷಣ ತಜ್ಞರ ಅಭಿಪ್ರಾಯ ಸಹ ಪಡೆದಿದ್ದೇನೆ ಎಂದರು.

ಕೋವಿಡ್ ವ್ಯಾಪಕವಾಗಿರುವ ಕಾರಣ ರಾಜ್ಯದಲ್ಲಿ ಈ ವರ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದಿರಲು ತೀರ್ಮಾನಿಸಲಾಗಿದೆ. ಪ್ರಥಮ ಪಿಯುಸಿಯಲ್ಲಿ ತೆಗೆದುಕೊಂಡ ಅಂಕಗಳ ಆಧಾರದ ಮೇಲೆ ಗ್ರೇಡಿಂಗ್ ನೀಡಿ ಈ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು. ಯಾವುದೇ ವಿದ್ಯಾರ್ಥಿ ತನಗೆ ಸಿಕ್ಕ ಗ್ರೇಡ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರೆ ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ಕೋವಿಡ್ ಬಿಕ್ಕಟ್ಟು ಮುಗಿದ ನಂತರ ಪರೀಕ್ಷೆ ನಡೆಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

Sponsors

Related Articles

Back to top button