ಸುಳ್ಯದಲ್ಲಿ ಶೂಟ್ ಔಟ್ – ಕೊಲೆ ಪ್ರಕರಣದ ಆರೋಪಿ ಗುಂಡಿಗೆ ಬಲಿ…

ಸುಳ್ಯ: ಇಂದು ಮುಂಜಾನೆ 6.30 ರ ಹೊತ್ತಿಗೆ ಕಾರಲ್ಲಿ ಬಂದ ಅಪರಿಚಿತರು ಸುಳ್ಯ ಶಾಂತಿ ನಗರದಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರಿಗೆ ಗುಂಡಿಕ್ಕಿ ಹೋದ ಘಟನೆ ವರದಿಯಾಗಿದೆ.ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಾವು ಸಂಭವಿಸಿದೆ.
ಕೊಲೆಯಾದ ವ್ಯಕ್ತಿ ಸಂಪತ್ , ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿ. ಇಂದು 6 ಗಂಟೆಗೆ ಸಂಪತ್ ತನ್ನ ನಿವಾಸದಿಂದ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಮೊದಲು ಕಾರಿನ ಗ್ಲಾಸಿಗೆ ಗುಂಡು ಹಾರಿಸಿದ್ದಾರೆ. ಆ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್ ಗೆ ತಾಗಿ ನಿಂತಿದೆ. ಅಲ್ಲಿಂದ ತಪ್ಪಿಸಿಕೊಂಡ ಸಂಪತ್ ಸಮೀಪದಲ್ಲಿದ್ದ ಕಾಂತಪ್ಪ ಎಂಬವರ ಮನೆಗೆ ಓಡಿ ಹೋಗಿದ್ದಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಹಿಂಬಾಲಿಸಿಕೊಂಡು ಗುಂಡು ಹಾರಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ ಜೋಗಿ, ಎಸ್ ಐ ಹರೀಶ್ ಹಾಗೂ ಪೋಲೀಸರು ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button