ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪ್ಪಾಡಿ – ಪುನಃಪ್ರತಿಷ್ಠಾಪನೆ ಅಷ್ಟಬಂಧ ನವೀಕರಣ ಬ್ರಹ್ಮಕಲಶೋತ್ಸವ-ಪೂರ್ವಭಾವಿ ಸಿದ್ಧತಾ ಸಭೆ…

ಬಂಟ್ವಾಳ: ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪ್ಪಾಡಿ ಸಜಿಪಮೂಡ ಬಂಟ್ವಾಳ ಇದರ ಪುನಃಪ್ರತಿಷ್ಠಾಪನೆ ಅಷ್ಟಬಂಧ ನವೀಕರಣ ಬ್ರಹ್ಮಕಲಶೋತ್ಸವ ಬ್ರಹ್ಮಶ್ರೀ ನೀಲೇಶ್ವರ ಕೆ ಉಚ್ಚಿಲ್ಲತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ದಶಂಬರ 26 27 28 29ರಂದು ಶ್ರದ್ಧಾಭಕ್ತಿಯಿಂದ ಜರಗಲಿದ್ದು, ಪ್ರಯುಕ್ತ ಪೂರ್ವಭಾವಿ ಸಿದ್ಧತಾ ಸಭೆ ಭಾನುವಾರದಂದು ದೇವಾಲಯದ ವಠಾರದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ ಅಧ್ಯಕ್ಷತೆಯಲ್ಲಿ ಜರಗಿತು.
ಸಜಿಪ ಮಾ ಗಣೆ ತಂತ್ರಿ ಎo ಸುಬ್ರಮಣ್ಯ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀಕಾಂತ ಶೆಟ್ಟಿ ಸಂಕೇಶ, ಗೌರವಾಧ್ಯಕ್ಷ ಕೆ ಸದಾನಂದ ಶೆಟ್ಟಿ, ಪದಾಧಿಕಾರಿಗಳಾದ ಜಯಪ್ರಕಾಶ್, ರಮೇಶ್, ಚಂದ್ರಶೇಖರ್, ಸುರೇಶ್ ಬಂಗೇರ, ಲಿಂಗಪ್ಪ ದೊಟ, ಸುರೇಶ್ ಪೂಜಾರಿ, ಹರೀಶ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳೇಪಾಡಿಗುತ್ತು, ಮಂಗಳೂರು ಲೋಕಸಭಾ ಸದಸ್ಯ, ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕರ್ನಾಟಕ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಭಟ್, ಕರ್ನಾಟಕ ರಾಜ್ಯ ಸರ್ಕಾರ ಸಚಿವರಾದ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ದತ್ತಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ಕಲ್ಲಡ್ಕ ಪ್ರಭಾಕರ್ ಭಟ್ ಮೊದಲಾದ ಗಣ್ಯರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಆಯೋಜಿಸಲು ನಿರ್ಣಯಿಸಲಾಯಿತು.

Sponsors

Related Articles

Back to top button