ಆ. 21 ರಂದು ಶ್ರೀ ಶಂಕರ ಪತ್ತಿನ ಸಹಕಾರ ಸಂಘ ನಿ. ಉದ್ಘಾಟನೆ…

ಬಂಟ್ವಾಳ: ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಯ ಧ್ಯೇಯೋದ್ಧೇಶಗಳನ್ನು ಇಟ್ಟುಕೊಂಡು ಮೆಲ್ಕಾರ್ ನ ಎಮ್.ಹೆಚ್. ಹೈಟ್ಸ್ ನಲ್ಲಿ ಆರಂಭಗೊಳ್ಳಲಿರುವ ಶ್ರೀ ಶಂಕರ ಪತ್ತಿನ ಸಹಕಾರ ಸಂಘ ಮೆಲ್ಕಾರ್ ಇದರ ಉದ್ಘಾಟನೆ ಆ. 21 ರಂದು ನಡೆಯಲಿದೆ.
ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಸಂಘದ ಮುಖ್ಯ ಪ್ರವರ್ತಕ ಕೈಯೂರು ನಾರಾಯಣ ಭಟ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಭದ್ರತಾ ಕೊಠಡಿಯನ್ನು ಉದ್ಘಾಟಿಸುವರು. ಮಾಜಿ ಸಚಿವ ಬಿ.ರಮಾನಾಥ ರೈ ಗಣಕಯಂತ್ರ ಉದ್ಘಾಟನೆ ಮಾಡಲಿದ್ದು, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಎಮ್. ಹೆಚ್. ಹೈಟ್ಸ್ ನ ಮಾಲಕ ಮಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸಂಸ್ಥೆಯು ಸಾರ್ವಜನಿಕ ವ್ಯವಹಾರಗಳೊಂದಿಗೆ ಸಾಮಾಜಿಕ ಕಳಕಳಿಯನ್ನು ಹೊಂದಿದ್ದು ಒಂದು ಸಾವಿರಕ್ಕೂ ಮಿಕ್ಕಿ ಸದಸ್ಯರನ್ನು ಹೊಂದುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. 13 ಮಂದಿ ಸಹಪ್ರವರ್ತಕರು ಕಾರ್ಯನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರ ಸಹಕಾರದೊಂದಿಗೆ ಸಂಘವನ್ನು ನಡೆಸಲಾಗುವುದು ಎಂದು ವಿವರಿಸಿದರು.
ಸಂಘದ ಸಹಪ್ರವರ್ತಕರಾದ ಜಯಾನಂದ ಪೆರಾಜೆ, ಜಯರಾಮ ಪೂಜಾರಿ, ಮುರಳೀಧರ ರಾವ್, ವೇ.ಮೂ. ಎಮ್. ಈಶ್ವರ ಭಟ್ ಕೈಯೂರು, ವೇ.ಮೂ. ಸುದರ್ಶನ ಮಯ್ಯ ಕೊಳಕೆ, ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button