ನೂತನ ಶಾಲಾ ಕಟ್ಟಡ ಶಿಲಾನ್ಯಾಸ…

ಬಂಟ್ವಾಳ: ನೇತಾಜಿ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ ಬುಡೋಳಿ, ದಂಡೆಗೋಳಿ ಇಲ್ಲಿನ ನೂತನ ಶಾಲಾ ಕಟ್ಟಡದ ಕೊಠಡಿಗಳ ನಿರ್ಮಾಣಕ್ಕೆ ಶಿಲಾನ್ಯಾಸವು ನ.21 ರಂದು ಬೆಳಿಗ್ಗೆ 9.45 ಕ್ಕೆ ವೇ.ಮೂ.ಸುನಿಲ್ ಭಟ್ ಶ್ರೀಕ್ಷೇತ್ರ ಗಣೇಶಪುರ ಇವರ ಪೌರೋಹಿತ್ಯದಲ್ಲಿ ನೆರವೇರಲಿದೆ ಎಂದು ಗಣೇಶಪುರ ಜಾನಕಿ ಚಾರಿಟೇಬಲ್ ಸೇವಾ ಟ್ರಸ್ಟ್ ಕಾಟಿಪಳ್ಳ ಇದರ ಅಧ್ಯಕ್ಷ ಧಮೇಂದ್ರ ತಿಳಿಸಿದ್ದಾರೆ.
1965 ರಲ್ಲಿ ಪ್ರಾರಂಭಗೊಂಡ ಹಿರಿಯ ಪ್ರಾಥಮಿಕ ಶಾಲೆಯು ಕಟ್ಟಡ ಹಾಗೂ ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ಬಂದಿತ್ತು. ಶಾಲಾ ಸಂಚಾಲಕ ಶ್ರೀಪತಿ ಭಟ್ ಶಾಲೆಯ ದುಸ್ತಿಯ ಬಗ್ಗೆ ಸಭೆ ಕರೆದು ಶಾಲೆಯನ್ನು ಜೀರ್ಣೋದ್ಧಾರಗೊಳಿಸಲು ವಿನಂತಿಸಿಕೊಂಡಿದ್ದರು. ಈ ಬಗ್ಗೆ ಸ್ಥಳೀಯ ದಾನಿಗಳು ಹಳೆಯ ವಿದ್ಯಾರ್ಥಿಗಳು ಜಾನಕಿ ಟ್ರಸ್ಟ್‍ನೊಂದಿಗೆ ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸುವುದಾಗಿ ಭರವಸೆ ನೀಡಿದ್ದಾರೆ.ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ಕಟ್ಟಡ ನಿರ್ಮಾಣಮಾಡುವುದಲ್ಲದೆ ವಿದ್ಯಾರ್ಥಿಗಳನ್ನು ಸೇರಿಸುವ ಬಗ್ಗೆ ಸಂಕಲ್ಪ ಮಾಡಲಾಗಿದೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆಯಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಶಿಲನ್ಯಾಸ ನೆರವೇರಿಸಲಿದ್ದಾರೆ. ಶ್ರೀ ಕ್ಷೇತ್ರ ಕಟೀಲಿನ ಅನಂತ ಪದ್ಮನಾಭ ಅಸ್ರಣ್ಣ ಆಶೀರ್ವಚನ ಮಾಡಲಿದ್ದು ಹಲವು ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಗೋಷ್ಠಿಯಲ್ಲಿ ಮುಖ್ಯ ಗುರು ದೊಡ್ಡಪ್ಪ ಹೆಚ್, ಪ್ರಕಾಶ್ ಕುಮಾರ್ ಜೈನ್, ದೇವಪ್ಪ ಕುಲಾಲ್ ಉಪಸ್ಥಿತರಿದ್ದರು.

Sponsors

Related Articles

Back to top button