ಕೆಸಿಎಫ್ ಒಮಾನ್ – ಸಂಭ್ರಮ ಸಡಗರದಿಂದ ಜರುಗಿದ ಬೃಹತ್ ಮೀಲಾದ್ ಕಾನ್ಫರೆನ್ಸ್…

ಒಮಾನ್ : ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ಇದರ ರಾಷ್ಟ್ರೀಯ ಸಮಿತಿಯ ವತಿಯಿಂದ ಲೋಕಾನುಗ್ರಹಿ ಹಝ್ರತ್ ಪೈಗಂಬರ್ ಮುಹಮ್ಮದ್ (ಸ.ಅ) ರವರ 1495 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಬೃಹತ್ ಮೀಲಾದ್ ಕಾನ್ಫರೆನ್ಸ್ ಅತಿ ವಿಜೃಂಭಣೆಯಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅ.28 ( ರಬೀವುಲ್ ಅವ್ವಲ್ 12ರ ರಾತ್ರಿ) ರಂದು ಝೂಮ್ ಆನ್ಲೈನ್ ನಲ್ಲಿ “ಪ್ರವಾದಿ ಹಾದಿಯಲ್ಲಿ ಗೆಲುವಿದೆ” ಎಂಬ ಘೋಷ ವಾಕ್ಯ ದೊಂದಿಗೆ ಬಹಳ ಯಶಸ್ವಿಯಾಗಿ ಒಮಾನ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಅಯ್ಯೂಬ್ ಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕೆಸಿಎಫ್ ಒಮಾನ್ ಸಂಘಟನಾ ಅಧ್ಯಕ್ಷ ಸಯ್ಯದ್ ಆಬಿದ್ ತಂಙಳ್ ಅಲ್ ಹೈದ್ರೋಸಿ ಇವರ ದುವಾಃ ದೊಂದಿಗೆ ಆರಂಭಗೊಂಡ ಸಮಾರಂಭದ ಉದ್ಘಾಟನೆಯನ್ನು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಶೈಖ್ ಬಾವ ಹಾಜಿ ಇವರು ನೆರವೇರಿಸಿದರು.
ಮುಖ್ಯ ಪ್ರಭಾಷಣಗಾರರಾಗಿ ಎಸ್ಎಸ್ಎಫ್ ಕರ್ನಾಟಕ ರಾಜ್ಯ ಉಪಾಧ್ಯಕ್ಷ ರಾದ ಹಾಫಿಝ್ ಎಚ್. ಐ. ಸುಫಿಯಾನ್ ಸಖಾಫಿ ಕಾವಲ್ ಕಟ್ಟೆ ಇವರು ಪ್ರವಾದಿ ಮುಹಮ್ಮದ್( ಸ.ಅ) ರವರು ಈ ಜಗತ್ತಿಗೆ ಕಲಿಸಿಕೊಟ್ಟ ಶಾಂತಿಯುತ ಸಹಬಾಳ್ವೆ, ಸಮಾನತೆ, ಹಾಗೂ ಇನ್ನೂ ಹಲವಾರು ಪ್ರವಾದಿ ಮುಹಮ್ಮದ್ (ಸ.ಅ) ರವರ ಜೀವನದ ಕ್ರಮವನ್ನು ವಿವರಿಸಿದರು ಹಾಗೂ ಇಹ್ಸಾನ್ ಕರ್ನಾಟಕವು ಉತ್ತರ ಕರ್ನಾಟಕದಲ್ಲಿ ನಡೆಸುತ್ತಿರುವ ಇಸ್ಲಾಮಿಕ್ ದಅವಾ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.
ಹಾಗೂ ತನ್ವೀರ್ ಬಾಳೆಹನ್ನೂರು ಮತ್ತು ಅಬ್ದುಸಮದ್ ಉರುವಲ್ ಪದವು ಇವರಿಂದ ನ’ಅತೇ ಶರೀಫ್ ಮತ್ತು ಮೌಲೂದ್ ಮಜ್ಲುಸ್ , ಬುರ್ದ ಅಲಾಪನೆ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟರು.
ದುಅ ನೇತೃತ್ವವನ್ನು ಸಯ್ಯದ್ ಜಾಫರ್ ಅಸ್ಸಖಾಫ್ ತಂಙಳ್ ಇವರು ವಹಿಸಿದ್ದರು.ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಆಡಳಿತ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಬರ್ಕ ಬೊಲ್ಮಾರ್ ಮತ್ತು ಡಿಕೆಎಸ್ಸಿ ಒಮಾನ್ ಅಧ್ಯಕ್ಷ ರಾದ ಮೋನಬ್ಬ ಹಾಜಿ ಇವರು ಸಂದರ್ಭೋಚಿತ ವಾಗಿ ಮಾತನಾಡಿದರು
ಸಂಘಟನಾ ಕಾರ್ಯದರ್ಶಿ ಸಂಶುದ್ದೀನ್ ಪಾಲ್ತಡ್ಕ ಇವರು ಸ್ವಾಗತಿಸಿ, ಶಿಕ್ಷಣ ವಿಭಾಗದ ಕನ್ವೀನರ್ ಝುಬೈರ್ ಸ ಅದಿ ಪಾಟ್ರಕೋಡಿ ವಂದಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button