ಸುಭಾಷ್ ಯುವಕ ಮಂಡಲ ಸಜೀಪ ಮೂಡ 76ನೆಯ ಸ್ವಾತಂತ್ರ್ಯೋತ್ಸವ…

ಬಂಟ್ವಾಳ: ಸುಭಾಷ್ ಯುವಕ ಮಂಡಲ ಸಜೀಪ ಮೂಡ 76ನೆಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಸಂಘದ ಅಧ್ಯಕ್ಷ ಎಸ್ ಶ್ರೀಕಾಂತ್ ಶೆಟ್ಟಿ ನೆರವೇರಿಸಿದರು.
ಸ್ವಾತಂತ್ರ್ಯೋತ್ಸವದ ಶುಭ ಸಂದೇಶವನ್ನು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೀಡಿದರು. ಶ್ರೀ ಸದಾಶಿವ ದೇವಸ್ಥಾನ ಈಶ್ವರಮಂಗಲ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಪೂoಜಾ ,ಸುಭಾಷ್ ನಗರ ಶಾಲಾ ಮುಖ್ಯೋಪಾಧ್ಯಾಯನಿ ವತ್ಸಲಾ, ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಾಕ್ಷಿ, ಉಪಾಧ್ಯಕ್ಷ ಸಿದ್ದಿಕ್, ಸದಸ್ಯ ಯೋಗೀಶ್ ಬೆಲ್ಚಡ, ಶಾರದಾ ಪೂಜೆ ಮಹೋತ್ಸವ ಸಮಿತಿ ಅಧ್ಯಕ್ಷ ವಸಂತ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button