ಬಾಲವಿಕಾಸದ ನೂತನ ಕ್ರೀಡಾಂಗಣದಲ್ಲಿ ಶಿಕ್ಷಕ-ರಕ್ಷಕ ಕ್ರೀಡಾಕೂಟ…

ಬಂಟ್ವಾಳ ಡಿ.10:ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಿಕ್ಷಕ- ರಕ್ಷಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.
ಬಾಲ ವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ “ಬಾಂಧವ್ಯದ ಬೆಸುಗೆಯಲ್ಲಿ ಕ್ರೀಡೆಯ ಪಾತ್ರ ಬಹುಮುಖ್ಯವಾದದ್ದು ಎಂದರು.
ಆಡಳಿತಾಧಿಕಾರಿ ರವೀಂದ್ರ ದರ್ಬೆ ಮತ್ತು ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ. ಶೆಟ್ಟಿ ಶುಭಹಾರೈಸಿದರು. ಬಾಲವಿಕಾಸ ಟ್ರಸ್ಟ್ ನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಶಿಕ್ಷಕ- ರಕ್ಷಕ ಸಂಘದ ಸದಸ್ಯರು, ಪೋಷಕರು,ಶಾಲೆಯ ಸಿಬ್ಬಂದಿಗಳು ಭಾಗವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ದಿನಕರ ಪೂಜಾರಿ,ವಿಶಾಲಾಕ್ಷಿ ಎಚ್. ಆಳ್ವ ಸಹಕರಿಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ.ಶೆಟ್ಟಿ ಸ್ವಾಗತಿಸಿ, ಹರಿಪ್ರಸಾದ್ ಕುಲಾಲ್ ವಂದಿಸಿದರು. ಶಿಕ್ಷಕಿ ಸುಪ್ರಿಯಾ ನಿರೂಪಿಸಿದರು.

whatsapp image 2023 12 10 at 9.17.40 pm

Sponsors

Related Articles

Back to top button