ಪಾಣೆಮಂಗಳೂರು ಬಳಿ ಗ್ಯಾಸ್ ಟ್ಯಾಂಕರ್, ಕಾರು ಢಿಕ್ಕಿ – ಆರು ಮಂದಿ ಗಂಭೀರ…

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಮತ್ತು ಇಕೋ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ನಡೆದ ಪರಿಣಾಮ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಪಾಣೆಮಂಗಳೂರು ಬಳಿ ನಡೆದಿದೆ.
ಕಿನ್ನಿಗೋಳಿ ಐಕಳ ನಿವಾಸಿಗಳು ಸುಳ್ಯ ನಿಂತಿಕಲ್ಲು ಎಂಬಲ್ಲಿ ಕೊರಗಜ್ಜ ದೈವದ ನರ್ತನ ಸೇವೆಗೆ ಡೋಲು ಬಾರಿಸುವ ಸೇವೆ ಸಲ್ಲಿಸಿದ ಬಳಿಕ ಬೆಳಿಗ್ಗೆ ಹಿಂತಿರುಗುತ್ತಿದ್ದರು. ಪಾಣೆಮಂಗಳೂರು ಸಮೀಪಿಸುತ್ತಿದ್ದಂತೆ ಮುಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಲಾರಿಗೆ ಮುಖಾಮುಖಿ ಢಿಕ್ಕಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಘನಾಥ, ಶೇಖರ ಐಕಳ, ಮುದರ, ರಾಜೇಶ್, ಸಂದೀಪ್ ಗೋಪಾಲ ಎಂಬವರಿಗೆ ಗಂಭೀರ ಗಾಯವಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button