ವಿಧಾನಸಭಾ ಅಧ್ಯಕ್ಷ ಯು. ಟಿ. ಖಾದರ್ ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿಯಾದ ಸಂಪಾಜೆ ನಿಯೋಗ…

ಸುಳ್ಯ: ಕೆಪಿಸಿಸಿ ಕಾರ್ಯದರ್ಶಿ ಹಾಗು ಮುಖ್ಯ ವಕ್ತಾರ ಟಿ. ಎಂ ಶಾಹಿದ್ ನೇತೃತ್ವದಲ್ಲಿ ಸಂಪಾಜೆಯ ನಿಯೋಗ ವಿಧಾನಸಭಾ ಅಧ್ಯಕ್ಷರಾದ ಯು. ಟಿ. ಖಾದರ್ ರವರನ್ನು ಭೇಟಿಯಾಗಿ ಸಂಪಾಜೆ ಗ್ರಾಮದ ಮೂಲಭೂತ ಸಮಸ್ಯೆಗಳು, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಗಿರುವ ಹಾನಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ 10 ಕೋಟಿ ರೂಪಾಯಿಗಳ ವಿಶೇಷ ಅನುದಾನ ನೀಡುವಂತೆ ಮುಖ್ಯ ಮಂತ್ರಿ ಯವರಿಗೆ ಶಿಫಾರಸ್ಸು ಪತ್ರ ನೀಡಲು ವಿನಂತಿ ಮಾಡಲಾಯಿತು.
ಮನವಿಗೆ ಸ್ಪಂದಿಸಿದ ಯು. ಟಿ. ಖಾದರ್ ಅವರು ಶಿಫಾರಸ್ಸು ಪತ್ರ ನೀಡಿದರು.

ಅರೋಗ್ಯ ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಕೂಡ ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು, ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ, ಸುಂದರಿ ಮುಂಡಡ್ಕ, ಉಪಾಧ್ಯಕ್ಷರಾದ ಎಸ್. ಕೆ. ಹನೀಫ್,ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಿಕ್ ಕೊಕ್ಕೋ, ಫಾರ್ವರ್ಡ್ ಗ್ರೂಪ್ ನ ಡಾ. ಉಮ್ಮರ್ ಬೀಜದಕಟ್ಟೆ, ಸಲೀಂ ಪೆರುಂಗೋಡಿ, ಹಾರಿಸ್ ಪಿ. ಎಂ, ಅಯ್ಯುಬ್ ಗೂನಡ್ಕ, ಮಂಜುನಾಥ್, ಉನೈಸ್ ಗೂನಡ್ಕ, ಹನೀಫ್ ಕಲ್ಲುಗುಂಡಿ ಮೊದಲಾದವರು ಉಪಸ್ಥಿತರಿದ್ದರು.

whatsapp image 2023 10 28 at 12.57.08 pm (1)

Sponsors

Related Articles

Back to top button